August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ವಿಷಯದ ಕುರಿತು ಸೆ.27 ರಂದು ಮಾಹಿತಿ ಕಾರ್ಯಗಾರ ನಡೆಸಲಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದೀಕ್ಷಿತಾ ಹಾಗೂ ದೀಕ್ಷಿತಾ . ಎ . ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆದಿರುವ ನವೀನತೆಗಳು, ಡಿಜಿಟಲ್ ಬ್ಯಾಂಕಿಂಗ್ ಪ್ರಗತಿ, ಗ್ರಾಹಕರಿಗೆ ಲಭ್ಯವಾಗುತ್ತಿರುವ ಸೌಲಭ್ಯಗಳು ಮತ್ತು ಬ್ಯಾಂಕ್‌ಗಳ ಆರ್ಥಿಕ ಅಭಿವೃದ್ಧಿಯಲ್ಲಿನ ಪಾತ್ರವನ್ನು ವಿವರಿಸಿದರು. ಹಾಗೆಯೇ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಖಾಸಗಿ ವಲಯದ ಬ್ಯಾಂಕ್‌ಗಳ ವೈಶಿಷ್ಟ್ಯತೆ, ಅವುಗಳ ಸಾಧನೆ ಹಾಗೂ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು.

ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ,ಸಂಯೋಜಕರಾದ ಯಶವಂತ ಜಿ ನಾಯಕ್, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya
error: Content is protected !!