25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಗೇರುಕಟ್ಟೆ : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯಲ್ಲಿ ಪೋಷನ್ ಮಾಸಾಚರಣೆ ಅಂಗವಾಗಿ ಪೌಷ್ಟಿಕಾಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು.

ಗೇರುಕಟ್ಟೆ ಆರೋಗ್ಯ ಕೇಂದ್ರದ ಸಿ.ಹೆಚ್.ಓ. ಆರೋಗ್ಯಧಿಕಾರಿ ನಾಗರಾಜ್ ಉತ್ತಮ ಆರೋಗ್ಯ ನಾವು ಸೇವಿಸುವ ಗುಣಮಟ್ಟದ ಆಹಾರ ಸೇವಿಸುವುದರಿಂದ ಶಾರೀರಿಕವಾಗಿ, ದೈಹಿಕ ಸಾಮರ್ಥ್ಯ ಹೊಂದಲು ಸಾಧ್ಯ. ಅಲ್ಲದೆ ಅಪೌಷ್ಟಿಕತೆಯಿಂದ ಮುಕ್ತಿ ಪಡೆಯಲು ಪೌಷ್ಠಿಕಾಹಾರಗಳ ಸೇವನೆಯಲ್ಲಿ ಮಕ್ಕಳ ಮನವೊಲಿಸುವಲ್ಲಿ ಪೋಷಕರ ಕೆಲಸವಾಗಬೇಕು ಎಂದು ಹೇಳಿದರು.

ಸೊಪ್ಪು, ತರಕಾರಿಗಳನ್ನು ಸೇವಿಸುವ ಮೂಲಕ ಆರೋಗ್ಯದ ಜೀವನ ನಡೆಸಲು ಸಾಧ್ಯ. ಮಾತ್ರವಲ್ಲದೇ ಮಾರುಕಟ್ಟೆಯಲ್ಲಿ ಸಿಗುವ ಪಾಸ್ಟ್ ಪುಡ್, ತಿಂಡಿ, ತಿನಿಸುಗಳನ್ನು ಮಕ್ಕಳಿಗೆ ಕೊಡುವುದರಿಂದ ಮಕ್ಕಳ ಆರೋಗ್ಯ ಮತ್ತು ಭವಿಷ್ಯದಲ್ಲಿ ತೊಂದರೆಗಳು ಉಂಟಾಗುತ್ತದೆ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ಸಿಗುವ ಆಹಾರ, ಪದಾರ್ಥ ಮತ್ತು ಸಲಹೆಗಳಿಂದ ನಮ್ಮ ಜೀವನದಲ್ಲಿ ಉತ್ತಮ ಆರೋಗ್ಯ ಸಿಗುತ್ತದೆ ಎಂದು ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಹೇಳಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ನೀತಾ ಸತೀಶ್ ಸಭೆಯ ಅಧ್ಯಕ್ಷತೆ ವಹಿಸಿದರು.ಗರ್ಭಿಣಿ ಅರ್ಪಿತಾ ಅವರಿಗೆ ಸಿಮಂತ ಮಾಡಿದರು. ರಿಝ್ಮಾ ಫಾತಿಮ ಮಗುವಿಗೆ ಅನ್ನ ಪ್ರಶಾನ್ನ ನೀಡಿದರು. ಮಕ್ಕಳ ಪೋಷಕರು ಮನೆಯಲ್ಲಿ ತಯಾರಿಸಿ ತಂದಿರುವ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿ, ಸಾಮೂಹಿಕವಾಗಿ ಎಲ್ಲಾರು ಭೋಜನ ಸೇವಿಸಿದರು.

ಅಂಗನವಾಡಿ ಸಹಾಯಕಿ ಗೀತಾ ಸಹಕರಿಸಿದರು. ಲತಾಲಾಕ್ಷಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್.ನಿರೂಪಿಸಿ, ವಂದಿಸಿದರು.

Related posts

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!