25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಗೇರುಕಟ್ಟೆ : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯಲ್ಲಿ ಪೋಷನ್ ಮಾಸಾಚರಣೆ ಅಂಗವಾಗಿ ಪೌಷ್ಟಿಕಾಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು.

ಗೇರುಕಟ್ಟೆ ಆರೋಗ್ಯ ಕೇಂದ್ರದ ಸಿ.ಹೆಚ್.ಓ. ಆರೋಗ್ಯಧಿಕಾರಿ ನಾಗರಾಜ್ ಉತ್ತಮ ಆರೋಗ್ಯ ನಾವು ಸೇವಿಸುವ ಗುಣಮಟ್ಟದ ಆಹಾರ ಸೇವಿಸುವುದರಿಂದ ಶಾರೀರಿಕವಾಗಿ, ದೈಹಿಕ ಸಾಮರ್ಥ್ಯ ಹೊಂದಲು ಸಾಧ್ಯ. ಅಲ್ಲದೆ ಅಪೌಷ್ಟಿಕತೆಯಿಂದ ಮುಕ್ತಿ ಪಡೆಯಲು ಪೌಷ್ಠಿಕಾಹಾರಗಳ ಸೇವನೆಯಲ್ಲಿ ಮಕ್ಕಳ ಮನವೊಲಿಸುವಲ್ಲಿ ಪೋಷಕರ ಕೆಲಸವಾಗಬೇಕು ಎಂದು ಹೇಳಿದರು.

ಸೊಪ್ಪು, ತರಕಾರಿಗಳನ್ನು ಸೇವಿಸುವ ಮೂಲಕ ಆರೋಗ್ಯದ ಜೀವನ ನಡೆಸಲು ಸಾಧ್ಯ. ಮಾತ್ರವಲ್ಲದೇ ಮಾರುಕಟ್ಟೆಯಲ್ಲಿ ಸಿಗುವ ಪಾಸ್ಟ್ ಪುಡ್, ತಿಂಡಿ, ತಿನಿಸುಗಳನ್ನು ಮಕ್ಕಳಿಗೆ ಕೊಡುವುದರಿಂದ ಮಕ್ಕಳ ಆರೋಗ್ಯ ಮತ್ತು ಭವಿಷ್ಯದಲ್ಲಿ ತೊಂದರೆಗಳು ಉಂಟಾಗುತ್ತದೆ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ಸಿಗುವ ಆಹಾರ, ಪದಾರ್ಥ ಮತ್ತು ಸಲಹೆಗಳಿಂದ ನಮ್ಮ ಜೀವನದಲ್ಲಿ ಉತ್ತಮ ಆರೋಗ್ಯ ಸಿಗುತ್ತದೆ ಎಂದು ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಹೇಳಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ನೀತಾ ಸತೀಶ್ ಸಭೆಯ ಅಧ್ಯಕ್ಷತೆ ವಹಿಸಿದರು.ಗರ್ಭಿಣಿ ಅರ್ಪಿತಾ ಅವರಿಗೆ ಸಿಮಂತ ಮಾಡಿದರು. ರಿಝ್ಮಾ ಫಾತಿಮ ಮಗುವಿಗೆ ಅನ್ನ ಪ್ರಶಾನ್ನ ನೀಡಿದರು. ಮಕ್ಕಳ ಪೋಷಕರು ಮನೆಯಲ್ಲಿ ತಯಾರಿಸಿ ತಂದಿರುವ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿ, ಸಾಮೂಹಿಕವಾಗಿ ಎಲ್ಲಾರು ಭೋಜನ ಸೇವಿಸಿದರು.

ಅಂಗನವಾಡಿ ಸಹಾಯಕಿ ಗೀತಾ ಸಹಕರಿಸಿದರು. ಲತಾಲಾಕ್ಷಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್.ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya
error: Content is protected !!