July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಗೇರುಕಟ್ಟೆ : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯಲ್ಲಿ ಪೋಷನ್ ಮಾಸಾಚರಣೆ ಅಂಗವಾಗಿ ಪೌಷ್ಟಿಕಾಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು.

ಗೇರುಕಟ್ಟೆ ಆರೋಗ್ಯ ಕೇಂದ್ರದ ಸಿ.ಹೆಚ್.ಓ. ಆರೋಗ್ಯಧಿಕಾರಿ ನಾಗರಾಜ್ ಉತ್ತಮ ಆರೋಗ್ಯ ನಾವು ಸೇವಿಸುವ ಗುಣಮಟ್ಟದ ಆಹಾರ ಸೇವಿಸುವುದರಿಂದ ಶಾರೀರಿಕವಾಗಿ, ದೈಹಿಕ ಸಾಮರ್ಥ್ಯ ಹೊಂದಲು ಸಾಧ್ಯ. ಅಲ್ಲದೆ ಅಪೌಷ್ಟಿಕತೆಯಿಂದ ಮುಕ್ತಿ ಪಡೆಯಲು ಪೌಷ್ಠಿಕಾಹಾರಗಳ ಸೇವನೆಯಲ್ಲಿ ಮಕ್ಕಳ ಮನವೊಲಿಸುವಲ್ಲಿ ಪೋಷಕರ ಕೆಲಸವಾಗಬೇಕು ಎಂದು ಹೇಳಿದರು.

ಸೊಪ್ಪು, ತರಕಾರಿಗಳನ್ನು ಸೇವಿಸುವ ಮೂಲಕ ಆರೋಗ್ಯದ ಜೀವನ ನಡೆಸಲು ಸಾಧ್ಯ. ಮಾತ್ರವಲ್ಲದೇ ಮಾರುಕಟ್ಟೆಯಲ್ಲಿ ಸಿಗುವ ಪಾಸ್ಟ್ ಪುಡ್, ತಿಂಡಿ, ತಿನಿಸುಗಳನ್ನು ಮಕ್ಕಳಿಗೆ ಕೊಡುವುದರಿಂದ ಮಕ್ಕಳ ಆರೋಗ್ಯ ಮತ್ತು ಭವಿಷ್ಯದಲ್ಲಿ ತೊಂದರೆಗಳು ಉಂಟಾಗುತ್ತದೆ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ಸಿಗುವ ಆಹಾರ, ಪದಾರ್ಥ ಮತ್ತು ಸಲಹೆಗಳಿಂದ ನಮ್ಮ ಜೀವನದಲ್ಲಿ ಉತ್ತಮ ಆರೋಗ್ಯ ಸಿಗುತ್ತದೆ ಎಂದು ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಹೇಳಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ನೀತಾ ಸತೀಶ್ ಸಭೆಯ ಅಧ್ಯಕ್ಷತೆ ವಹಿಸಿದರು.ಗರ್ಭಿಣಿ ಅರ್ಪಿತಾ ಅವರಿಗೆ ಸಿಮಂತ ಮಾಡಿದರು. ರಿಝ್ಮಾ ಫಾತಿಮ ಮಗುವಿಗೆ ಅನ್ನ ಪ್ರಶಾನ್ನ ನೀಡಿದರು. ಮಕ್ಕಳ ಪೋಷಕರು ಮನೆಯಲ್ಲಿ ತಯಾರಿಸಿ ತಂದಿರುವ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿ, ಸಾಮೂಹಿಕವಾಗಿ ಎಲ್ಲಾರು ಭೋಜನ ಸೇವಿಸಿದರು.

ಅಂಗನವಾಡಿ ಸಹಾಯಕಿ ಗೀತಾ ಸಹಕರಿಸಿದರು. ಲತಾಲಾಕ್ಷಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್.ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya
error: Content is protected !!