September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಬೆಳ್ತಂಗಡಿ ತಹಶೀಲ್ದಾ‌ರ್ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದರು.

ಈ ಗಡಿಪಾರು ಆದೇಶದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಸೆ.25 ಬೆಳ್ತಂಗಡಿ ತಹಶೀಲ್ದಾರ್ ಗೆ ಸೆ.29 ರಂದು ಬೆಳ್ತಂಗಡಿ ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಬೆಳ್ತಂಗಡಿ ಪೊಲೀಸರು ಪ್ರತಿಭಟನೆ ಅರ್ಜಿ ಪರಿಶೀಲನೆ ಮಾಡಿ ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಆಗುವ ಸಂಭವ ಇರುವುದಾಗಿ ತಿಳಿಸಿ ಅನುಮತಿ ನೀಡದಂತೆ ಅಭಿಪ್ರಾಯ ನೀಡಿದ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೆ.26 ರಂದು ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಹಿಂಬರಹ ನೀಡಿದ್ದಾರೆ.

Related posts

ನೆರಿಯ: ಸಂಜೀವ ಗೌಡ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!