July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಗೇರುಕಟ್ಟೆ : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯಲ್ಲಿ ಪೋಷನ್ ಮಾಸಾಚರಣೆ ಅಂಗವಾಗಿ ಪೌಷ್ಟಿಕಾಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು.

ಗೇರುಕಟ್ಟೆ ಆರೋಗ್ಯ ಕೇಂದ್ರದ ಸಿ.ಹೆಚ್.ಓ. ಆರೋಗ್ಯಧಿಕಾರಿ ನಾಗರಾಜ್ ಉತ್ತಮ ಆರೋಗ್ಯ ನಾವು ಸೇವಿಸುವ ಗುಣಮಟ್ಟದ ಆಹಾರ ಸೇವಿಸುವುದರಿಂದ ಶಾರೀರಿಕವಾಗಿ, ದೈಹಿಕ ಸಾಮರ್ಥ್ಯ ಹೊಂದಲು ಸಾಧ್ಯ. ಅಲ್ಲದೆ ಅಪೌಷ್ಟಿಕತೆಯಿಂದ ಮುಕ್ತಿ ಪಡೆಯಲು ಪೌಷ್ಠಿಕಾಹಾರಗಳ ಸೇವನೆಯಲ್ಲಿ ಮಕ್ಕಳ ಮನವೊಲಿಸುವಲ್ಲಿ ಪೋಷಕರ ಕೆಲಸವಾಗಬೇಕು ಎಂದು ಹೇಳಿದರು.

ಸೊಪ್ಪು, ತರಕಾರಿಗಳನ್ನು ಸೇವಿಸುವ ಮೂಲಕ ಆರೋಗ್ಯದ ಜೀವನ ನಡೆಸಲು ಸಾಧ್ಯ. ಮಾತ್ರವಲ್ಲದೇ ಮಾರುಕಟ್ಟೆಯಲ್ಲಿ ಸಿಗುವ ಪಾಸ್ಟ್ ಪುಡ್, ತಿಂಡಿ, ತಿನಿಸುಗಳನ್ನು ಮಕ್ಕಳಿಗೆ ಕೊಡುವುದರಿಂದ ಮಕ್ಕಳ ಆರೋಗ್ಯ ಮತ್ತು ಭವಿಷ್ಯದಲ್ಲಿ ತೊಂದರೆಗಳು ಉಂಟಾಗುತ್ತದೆ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ಸಿಗುವ ಆಹಾರ, ಪದಾರ್ಥ ಮತ್ತು ಸಲಹೆಗಳಿಂದ ನಮ್ಮ ಜೀವನದಲ್ಲಿ ಉತ್ತಮ ಆರೋಗ್ಯ ಸಿಗುತ್ತದೆ ಎಂದು ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಹೇಳಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ನೀತಾ ಸತೀಶ್ ಸಭೆಯ ಅಧ್ಯಕ್ಷತೆ ವಹಿಸಿದರು.ಗರ್ಭಿಣಿ ಅರ್ಪಿತಾ ಅವರಿಗೆ ಸಿಮಂತ ಮಾಡಿದರು. ರಿಝ್ಮಾ ಫಾತಿಮ ಮಗುವಿಗೆ ಅನ್ನ ಪ್ರಶಾನ್ನ ನೀಡಿದರು. ಮಕ್ಕಳ ಪೋಷಕರು ಮನೆಯಲ್ಲಿ ತಯಾರಿಸಿ ತಂದಿರುವ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿ, ಸಾಮೂಹಿಕವಾಗಿ ಎಲ್ಲಾರು ಭೋಜನ ಸೇವಿಸಿದರು.

ಅಂಗನವಾಡಿ ಸಹಾಯಕಿ ಗೀತಾ ಸಹಕರಿಸಿದರು. ಲತಾಲಾಕ್ಷಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್.ನಿರೂಪಿಸಿ, ವಂದಿಸಿದರು.

Related posts

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!