July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

ಬೆಳ್ತಂಗಡಿ : ಸಂತ ತೆರೇಸಾ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.25ರಂದು ಧರ್ಮಸ್ಥಳ ಗ್ರಾಮೀಣೋದ್ಯೋಗ ಸಂಸ್ಥೆ ಸಿರಿಯ ನೂತನ ಉದ್ಯಮ ಘಟಕವಾದ ಬೆಳ್ತಂಗಡಿ ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ ಉದ್ಯಮ ಕಾರ್ಯಾಚರಣೆಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲಾಯಿತು.

ಸಿರಿ ಗ್ರಾಮೀಣೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ಜೀವನ್ ರವರು ಸಂಸ್ಥೆಯ ಕಾರ್ಯ ವೈಖರಿಯ ಕುರಿತು ಮಾಹಿತಿಯನ್ನು ನೀಡಿದರು. ಅಲ್ಲಿ ಕಾರ್ಯಾಚರಿಸುತ್ತಿರುವಂತಹ ಬಟ್ಟೆ ಉದ್ಯಮ, ಫಿನೈಲ್ ತಯಾರಿಕಾ ಘಟಕ, ಅಗರಬತ್ತಿ ತಯಾರಿಕಾ ಘಟಕ, ಎಂಬ್ರಾಯ್ಡರಿ ಮೊದಲಾದ ಘಟಕಗಳ ಕಾರ್ಯ ನಿರ್ವಹಣೆ, ಕಾರ್ಮಿಕರು ಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ,ಉದ್ಯೋಗಾವಕಾಶಗಳು, ಲಾಭಾಂಶ ನಷ್ಟದ ಕುರಿತು ಪ್ರಾಯೋಗಿಕ ಪ್ರತ್ಯಕ್ಷಣೆಯ ಮೂಲಕ ಸವಿಸ್ತಾರವಾಗಿ ತಿಳಿಸಿದರು.

ವಿದ್ಯಾರ್ಥಿಗಳು ಪೂರ್ಣ ಪ್ರಯೋಜನವನ್ನು ಪಡೆದರು. ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ನ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya
error: Content is protected !!