25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

ಬೆಳ್ತಂಗಡಿ : ಸಂತ ತೆರೇಸಾ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.25ರಂದು ಧರ್ಮಸ್ಥಳ ಗ್ರಾಮೀಣೋದ್ಯೋಗ ಸಂಸ್ಥೆ ಸಿರಿಯ ನೂತನ ಉದ್ಯಮ ಘಟಕವಾದ ಬೆಳ್ತಂಗಡಿ ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ ಉದ್ಯಮ ಕಾರ್ಯಾಚರಣೆಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲಾಯಿತು.

ಸಿರಿ ಗ್ರಾಮೀಣೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ಜೀವನ್ ರವರು ಸಂಸ್ಥೆಯ ಕಾರ್ಯ ವೈಖರಿಯ ಕುರಿತು ಮಾಹಿತಿಯನ್ನು ನೀಡಿದರು. ಅಲ್ಲಿ ಕಾರ್ಯಾಚರಿಸುತ್ತಿರುವಂತಹ ಬಟ್ಟೆ ಉದ್ಯಮ, ಫಿನೈಲ್ ತಯಾರಿಕಾ ಘಟಕ, ಅಗರಬತ್ತಿ ತಯಾರಿಕಾ ಘಟಕ, ಎಂಬ್ರಾಯ್ಡರಿ ಮೊದಲಾದ ಘಟಕಗಳ ಕಾರ್ಯ ನಿರ್ವಹಣೆ, ಕಾರ್ಮಿಕರು ಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ,ಉದ್ಯೋಗಾವಕಾಶಗಳು, ಲಾಭಾಂಶ ನಷ್ಟದ ಕುರಿತು ಪ್ರಾಯೋಗಿಕ ಪ್ರತ್ಯಕ್ಷಣೆಯ ಮೂಲಕ ಸವಿಸ್ತಾರವಾಗಿ ತಿಳಿಸಿದರು.

ವಿದ್ಯಾರ್ಥಿಗಳು ಪೂರ್ಣ ಪ್ರಯೋಜನವನ್ನು ಪಡೆದರು. ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ನ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya
error: Content is protected !!