September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

ಬೆಳ್ತಂಗಡಿ : ಸಂತ ತೆರೇಸಾ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.25ರಂದು ಧರ್ಮಸ್ಥಳ ಗ್ರಾಮೀಣೋದ್ಯೋಗ ಸಂಸ್ಥೆ ಸಿರಿಯ ನೂತನ ಉದ್ಯಮ ಘಟಕವಾದ ಬೆಳ್ತಂಗಡಿ ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ ಉದ್ಯಮ ಕಾರ್ಯಾಚರಣೆಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲಾಯಿತು.

ಸಿರಿ ಗ್ರಾಮೀಣೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ಜೀವನ್ ರವರು ಸಂಸ್ಥೆಯ ಕಾರ್ಯ ವೈಖರಿಯ ಕುರಿತು ಮಾಹಿತಿಯನ್ನು ನೀಡಿದರು. ಅಲ್ಲಿ ಕಾರ್ಯಾಚರಿಸುತ್ತಿರುವಂತಹ ಬಟ್ಟೆ ಉದ್ಯಮ, ಫಿನೈಲ್ ತಯಾರಿಕಾ ಘಟಕ, ಅಗರಬತ್ತಿ ತಯಾರಿಕಾ ಘಟಕ, ಎಂಬ್ರಾಯ್ಡರಿ ಮೊದಲಾದ ಘಟಕಗಳ ಕಾರ್ಯ ನಿರ್ವಹಣೆ, ಕಾರ್ಮಿಕರು ಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ,ಉದ್ಯೋಗಾವಕಾಶಗಳು, ಲಾಭಾಂಶ ನಷ್ಟದ ಕುರಿತು ಪ್ರಾಯೋಗಿಕ ಪ್ರತ್ಯಕ್ಷಣೆಯ ಮೂಲಕ ಸವಿಸ್ತಾರವಾಗಿ ತಿಳಿಸಿದರು.

ವಿದ್ಯಾರ್ಥಿಗಳು ಪೂರ್ಣ ಪ್ರಯೋಜನವನ್ನು ಪಡೆದರು. ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ನ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!