23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

ಬೆಳ್ತಂಗಡಿ : ಸಂತ ತೆರೇಸಾ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.25ರಂದು ಧರ್ಮಸ್ಥಳ ಗ್ರಾಮೀಣೋದ್ಯೋಗ ಸಂಸ್ಥೆ ಸಿರಿಯ ನೂತನ ಉದ್ಯಮ ಘಟಕವಾದ ಬೆಳ್ತಂಗಡಿ ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ ಉದ್ಯಮ ಕಾರ್ಯಾಚರಣೆಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲಾಯಿತು.

ಸಿರಿ ಗ್ರಾಮೀಣೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ಜೀವನ್ ರವರು ಸಂಸ್ಥೆಯ ಕಾರ್ಯ ವೈಖರಿಯ ಕುರಿತು ಮಾಹಿತಿಯನ್ನು ನೀಡಿದರು. ಅಲ್ಲಿ ಕಾರ್ಯಾಚರಿಸುತ್ತಿರುವಂತಹ ಬಟ್ಟೆ ಉದ್ಯಮ, ಫಿನೈಲ್ ತಯಾರಿಕಾ ಘಟಕ, ಅಗರಬತ್ತಿ ತಯಾರಿಕಾ ಘಟಕ, ಎಂಬ್ರಾಯ್ಡರಿ ಮೊದಲಾದ ಘಟಕಗಳ ಕಾರ್ಯ ನಿರ್ವಹಣೆ, ಕಾರ್ಮಿಕರು ಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ,ಉದ್ಯೋಗಾವಕಾಶಗಳು, ಲಾಭಾಂಶ ನಷ್ಟದ ಕುರಿತು ಪ್ರಾಯೋಗಿಕ ಪ್ರತ್ಯಕ್ಷಣೆಯ ಮೂಲಕ ಸವಿಸ್ತಾರವಾಗಿ ತಿಳಿಸಿದರು.

ವಿದ್ಯಾರ್ಥಿಗಳು ಪೂರ್ಣ ಪ್ರಯೋಜನವನ್ನು ಪಡೆದರು. ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ನ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya
error: Content is protected !!