September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಬೆಳ್ತಂಗಡಿ: ಗುಂಡೂರಿ ಕಡೆಯಿಂದ ಪಿಕ್ ಅಪ್ ವಾಹನದಲ್ಲಿ ದಿನೇಶ್ ಎಂಬಾತನು ಮರಳು ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ.

ಹೆಚ್ ಸಿ ಕೃಷ್ಣರವರು ಪಿಸಿ ಸಂತೋಷ್ ರವರೊಂದಿಗೆ ಇಲಾಖಾ ಬೈಕ್ನೊಂದಿಗೆ ಹೋಗುತ್ತಿರುವ ಸಂದರ್ಭದಲ್ಲಿ ಪಿಕ್ ಅಪ್ ವಾಹನ ಚಾಲಕ ದಿನೇಶ್ ಎಂಬಾತನು ಪಿಕ್ ಅಪ್ ವಾಹನ ನಿಲ್ಲಿಸಿ ಓಡಿ ತಪ್ಪಿಸಿಕೊಂಡಿದ್ದು, ಪಿಕ್ ಅಪ್ ವಾಹನ ಪರಿಶೀಲಿಸಲಾಗಿ ಸುಮಾರು ರೂ.6 ಸಾವಿರ ಮೌಲ್ಯದ ಒಂದು ಯುನಿಟ್ ನಷ್ಟು ಮರಳು ಪತ್ತೆಯಾಗಿದೆ.

ಆರೋಪಿತನು ಎಲ್ಲಿಂದಲೋ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸಿ ಆತನ ಬಾಬ್ತು ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡಿ ಸರರ್ಕಾರದ ರಾಜಸ್ವಕ್ಕೆ ನಷ್ಟ ಉಂಟು ಮಾಡಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya
error: Content is protected !!