32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

ಉಜಿರೆ: ಭಾರತದ ಜ್ಞಾನ ಸಂಪತ್ತು ವಿಶಿಷ್ಟವಾದದ್ದು. ಇದನ್ನು ಅರಿತು ನಾವೆಲ್ಲರೂ ಜ್ಞಾನಿಗಳಾಗೋಣ ಎಂದು ಎಸ್.ಡಿ. ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಹೇಳಿದರು.

ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ ” ಗಣಿತ ಸಂಸ್ಕೃತ ಸಂಗಮ ” ಎಂಬ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಜ್ಞಾನ ಪರಂಪರೆ ತನ್ನ ಆದಿಯಿಂದಲೂ ಜಗತ್ತಿನ ಏಳಿಗೆಗೆ ವಿಶಿಷ್ಠ ವಾದ ಮೌಲ್ಯಯುತ ಸಂಪತ್ತ್ತನ್ನು ನೀಡುತ್ತಾ ಬಂದಿದೆ. ಇದನ್ನು ಕಂಡ ವಿವಿಧ ದೇಶಗಳು ಭಾರತದ ಮೇಲೆ ದಾಳಿಮಾಡುತ್ತಾ ತಮ್ಮ ಪಾಶ್ಚಾತ್ಯ ಸಂಸ್ಕೃತಿಯನ್ನು ಸ್ಥಾಪಿಸಿದ್ದಾರೆ ಎಂದರು.

ಶಾಸ್ತ್ರಗಳ ನಡುವೆ ಸೇತುವೆ ನಿರ್ಮಾಣದ ಅಗತ್ಯವಿದೆ. ಈ ಅಗತ್ಯವನ್ನು ರಾಷ್ಟ್ರೀಯ ಶಿಕ್ಷಣ ನೀತಿ ಪೂರೈಸಿದೆ.
ಇದ್ಕಕೆ ಅನುಗುಣವಾಗಿ ಇಂದಿನ ಈ ಕಾರ್ಯಾಗಾರ ಉಪಯುಕ್ತವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ ಮಾತನಾಡಿ ‘ಐ ಕೆ ಎಸ್ ಶಿಕ್ಷಣ ರೀತಿ ತಿಳಿಯುವುದರಿಂದ ದೇಶಕ್ಕೆ ಜನರಿಗೆ ಉಪಯೋಗವಾಗಲಿದೆ. ನಾವು ಕಾಣುವ ಪ್ರತಿ ವಿಷಯದಲ್ಲೂ ಭಾರತೀಯ ಜ್ಞಾನ ಪರಂಪರೆ ಅಡಗಿದೆ. ಇದನ್ನು ನಾವು ಗ್ರಹಿಸೋಣ ಎಂದು ಅಧ್ಯಕ್ಷೀಯ ನುಡಿಗಳನ್ನು ಹೇಳಿದರು.

ಕಾರ್ಯಕ್ರಮದಲ್ಲಿ ಇರ್ವರು ಸಂಪನ್ಮೂಲ ವ್ಯಕ್ತಿಗಳಾದ ಪ್ರೊ.ಶ್ರೀಪತಿ ಕಲ್ಲೂರಾಯ ( ಅಧ್ಯಕ್ಷರು ವಿವೇಕಾನಂದ ಕಾಲೇಜು ಪುತ್ತೂರು ) ಮತ್ತು ಡಾ. ಸುರೇಶ್ ಬಾಬು ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಸಿಬಿಐಟಿ ಹೈದ್ರಾಬಾದ್ ಇವರಿಗೆ ಗೌರವಿಸಲಾಯಿತು.

ಕಾಲೇಜಿನ ಆಡಳಿತ ಕುಲಸಚಿವ ಡಾ. ಶ್ರೀಧರ್ ಎನ್ ಭಟ್ ಸ್ವಾಗತಿಸಿ, ಗಣಿತ ವಿಭಾಗದ ಮುಖ್ಯಸ್ಥ ಬಿ ಗಣೇಶ್ ನಾಯಕ್ ವಂದಿಸಿದರು.

Related posts

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!