23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ವಿಷಯದ ಕುರಿತು ಸೆ.27 ರಂದು ಮಾಹಿತಿ ಕಾರ್ಯಗಾರ ನಡೆಸಲಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದೀಕ್ಷಿತಾ ಹಾಗೂ ದೀಕ್ಷಿತಾ . ಎ . ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆದಿರುವ ನವೀನತೆಗಳು, ಡಿಜಿಟಲ್ ಬ್ಯಾಂಕಿಂಗ್ ಪ್ರಗತಿ, ಗ್ರಾಹಕರಿಗೆ ಲಭ್ಯವಾಗುತ್ತಿರುವ ಸೌಲಭ್ಯಗಳು ಮತ್ತು ಬ್ಯಾಂಕ್‌ಗಳ ಆರ್ಥಿಕ ಅಭಿವೃದ್ಧಿಯಲ್ಲಿನ ಪಾತ್ರವನ್ನು ವಿವರಿಸಿದರು. ಹಾಗೆಯೇ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಖಾಸಗಿ ವಲಯದ ಬ್ಯಾಂಕ್‌ಗಳ ವೈಶಿಷ್ಟ್ಯತೆ, ಅವುಗಳ ಸಾಧನೆ ಹಾಗೂ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು.

ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ,ಸಂಯೋಜಕರಾದ ಯಶವಂತ ಜಿ ನಾಯಕ್, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!