25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಗೇರುಕಟ್ಟೆ : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯಲ್ಲಿ ಪೋಷನ್ ಮಾಸಾಚರಣೆ ಅಂಗವಾಗಿ ಪೌಷ್ಟಿಕಾಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು.

ಗೇರುಕಟ್ಟೆ ಆರೋಗ್ಯ ಕೇಂದ್ರದ ಸಿ.ಹೆಚ್.ಓ. ಆರೋಗ್ಯಧಿಕಾರಿ ನಾಗರಾಜ್ ಉತ್ತಮ ಆರೋಗ್ಯ ನಾವು ಸೇವಿಸುವ ಗುಣಮಟ್ಟದ ಆಹಾರ ಸೇವಿಸುವುದರಿಂದ ಶಾರೀರಿಕವಾಗಿ, ದೈಹಿಕ ಸಾಮರ್ಥ್ಯ ಹೊಂದಲು ಸಾಧ್ಯ. ಅಲ್ಲದೆ ಅಪೌಷ್ಟಿಕತೆಯಿಂದ ಮುಕ್ತಿ ಪಡೆಯಲು ಪೌಷ್ಠಿಕಾಹಾರಗಳ ಸೇವನೆಯಲ್ಲಿ ಮಕ್ಕಳ ಮನವೊಲಿಸುವಲ್ಲಿ ಪೋಷಕರ ಕೆಲಸವಾಗಬೇಕು ಎಂದು ಹೇಳಿದರು.

ಸೊಪ್ಪು, ತರಕಾರಿಗಳನ್ನು ಸೇವಿಸುವ ಮೂಲಕ ಆರೋಗ್ಯದ ಜೀವನ ನಡೆಸಲು ಸಾಧ್ಯ. ಮಾತ್ರವಲ್ಲದೇ ಮಾರುಕಟ್ಟೆಯಲ್ಲಿ ಸಿಗುವ ಪಾಸ್ಟ್ ಪುಡ್, ತಿಂಡಿ, ತಿನಿಸುಗಳನ್ನು ಮಕ್ಕಳಿಗೆ ಕೊಡುವುದರಿಂದ ಮಕ್ಕಳ ಆರೋಗ್ಯ ಮತ್ತು ಭವಿಷ್ಯದಲ್ಲಿ ತೊಂದರೆಗಳು ಉಂಟಾಗುತ್ತದೆ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ಸಿಗುವ ಆಹಾರ, ಪದಾರ್ಥ ಮತ್ತು ಸಲಹೆಗಳಿಂದ ನಮ್ಮ ಜೀವನದಲ್ಲಿ ಉತ್ತಮ ಆರೋಗ್ಯ ಸಿಗುತ್ತದೆ ಎಂದು ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಹೇಳಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ನೀತಾ ಸತೀಶ್ ಸಭೆಯ ಅಧ್ಯಕ್ಷತೆ ವಹಿಸಿದರು.ಗರ್ಭಿಣಿ ಅರ್ಪಿತಾ ಅವರಿಗೆ ಸಿಮಂತ ಮಾಡಿದರು. ರಿಝ್ಮಾ ಫಾತಿಮ ಮಗುವಿಗೆ ಅನ್ನ ಪ್ರಶಾನ್ನ ನೀಡಿದರು. ಮಕ್ಕಳ ಪೋಷಕರು ಮನೆಯಲ್ಲಿ ತಯಾರಿಸಿ ತಂದಿರುವ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿ, ಸಾಮೂಹಿಕವಾಗಿ ಎಲ್ಲಾರು ಭೋಜನ ಸೇವಿಸಿದರು.

ಅಂಗನವಾಡಿ ಸಹಾಯಕಿ ಗೀತಾ ಸಹಕರಿಸಿದರು. ಲತಾಲಾಕ್ಷಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್.ನಿರೂಪಿಸಿ, ವಂದಿಸಿದರು.

Related posts

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಗ್ರಾಮ ಸಮಿತಿ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!