September 6, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

ನಡ: ನಡ ಗ್ರಾಮದ ಮೇಲಿನ ಮಂಜೊಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ ಹರಿಪ್ರಸಾದ್ ರವರ 2024 25 ನೇ ಸಾಲಿನ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ನಿರ್ಮಾಣವಾದ ಆಟೋ ನಿಲ್ದಾಣದ ನವನ್ನು ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೆ ಮಂಜುಳಾರವರು ಉದ್ಘಾಟನೆ ಮಾಡಿದರು.


ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರು ನಮ್ಮ ತುಳುನಾಡ್ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರು ಆದ ಸಯ್ಯದ್ ಹಬೀಬ್ ಆಟೋಗಳಿಗೆ ಸ್ಟಿಕ್ಕರ್ ಅಂಟಿಸುವ ಮೂಲಕ ಚಾಲನೆ ನೀಡಿದರು.
ನಡ ಗ್ರಾಮ ಪಂಚಾಯತ್ ಪಿ ಡಿ ಓ ಶ್ರೀನಿವಾಸ್ ಡಿ ಪಿ, ನಡ ಗ್ರಾಮದ ಲೈನ್ ಮ್ಯಾನ್ ಗಳಾದ ಅಶೋಕ್ ಹಾಗೂ ಪಿಡಬ್ಲ್ಯೂಡಿ ಕಂಟ್ರಾಕ್ಟರ್ ಲತೀಫ್ ಚಾರ್ಮಾಡಿ ಇವರಿಗೆ ಎಂ ಬಿ ಆಟೋ ಚಾಲಕ ಮಾಲಕರ ಸಂಘ ದಿಂದ ಸನ್ಮಾನ ಮಾಡಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಬಿ ರಾಜಶೇಖರ್ ಅಜ್ರಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ನಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಜಯ ಶೆಟ್ಟಿ, ನಡ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಿರಣ್ ಎಮ್. ದ. ಕ ಜಿಲ್ಲಾ ಆಟೋ ಯೂನಿಯನ್ ಪ್ರಧಾನ ಕಾರ್ಯದರ್ಶಿ ಅನ್ಸಾರ್ ಬಜಾಲ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಹಳ್ಳಿಮನೆ. ಗ್ರಾಮ ಪಂಚಾಯತ್ ಸದಸ್ಯರುಗಳಾದ ಪ್ರವೀಣ್ ವಿ ಜಿ, ಹರೀಶ್ ಎನ್.ಬಿ. ಲಲಿತ ಒಬಯ್ಯ ಗೌಡ, ಶಶಿಕಲಾ ಜೈನ್, ಮಾಜಿ ಅಧ್ಯಕ್ಷರು ಬಿ ಮುನಿರಾಜ ಅಜ್ರಿ, ಬಿ ವಿಠ್ಠಲ ಶೆಟ್ಟಿ, ನಡ ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರು ಜಾಕೀರ್ ಹುಸೇನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಭಾನು, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ನಾವೂರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.


ಎಂ ಬಿ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಬಿ.ಎ ರಜಾಕ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!