July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

ಬೆಳ್ತಂಗಡಿ : ಸಂತ ತೆರೇಸಾ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.25ರಂದು ಧರ್ಮಸ್ಥಳ ಗ್ರಾಮೀಣೋದ್ಯೋಗ ಸಂಸ್ಥೆ ಸಿರಿಯ ನೂತನ ಉದ್ಯಮ ಘಟಕವಾದ ಬೆಳ್ತಂಗಡಿ ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ ಉದ್ಯಮ ಕಾರ್ಯಾಚರಣೆಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲಾಯಿತು.

ಸಿರಿ ಗ್ರಾಮೀಣೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ಜೀವನ್ ರವರು ಸಂಸ್ಥೆಯ ಕಾರ್ಯ ವೈಖರಿಯ ಕುರಿತು ಮಾಹಿತಿಯನ್ನು ನೀಡಿದರು. ಅಲ್ಲಿ ಕಾರ್ಯಾಚರಿಸುತ್ತಿರುವಂತಹ ಬಟ್ಟೆ ಉದ್ಯಮ, ಫಿನೈಲ್ ತಯಾರಿಕಾ ಘಟಕ, ಅಗರಬತ್ತಿ ತಯಾರಿಕಾ ಘಟಕ, ಎಂಬ್ರಾಯ್ಡರಿ ಮೊದಲಾದ ಘಟಕಗಳ ಕಾರ್ಯ ನಿರ್ವಹಣೆ, ಕಾರ್ಮಿಕರು ಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ,ಉದ್ಯೋಗಾವಕಾಶಗಳು, ಲಾಭಾಂಶ ನಷ್ಟದ ಕುರಿತು ಪ್ರಾಯೋಗಿಕ ಪ್ರತ್ಯಕ್ಷಣೆಯ ಮೂಲಕ ಸವಿಸ್ತಾರವಾಗಿ ತಿಳಿಸಿದರು.

ವಿದ್ಯಾರ್ಥಿಗಳು ಪೂರ್ಣ ಪ್ರಯೋಜನವನ್ನು ಪಡೆದರು. ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ನ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya
error: Content is protected !!