September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಬೆಳ್ತಂಗಡಿ ತಹಶೀಲ್ದಾ‌ರ್ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದರು.

ಈ ಗಡಿಪಾರು ಆದೇಶದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಸೆ.25 ಬೆಳ್ತಂಗಡಿ ತಹಶೀಲ್ದಾರ್ ಗೆ ಸೆ.29 ರಂದು ಬೆಳ್ತಂಗಡಿ ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಬೆಳ್ತಂಗಡಿ ಪೊಲೀಸರು ಪ್ರತಿಭಟನೆ ಅರ್ಜಿ ಪರಿಶೀಲನೆ ಮಾಡಿ ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಆಗುವ ಸಂಭವ ಇರುವುದಾಗಿ ತಿಳಿಸಿ ಅನುಮತಿ ನೀಡದಂತೆ ಅಭಿಪ್ರಾಯ ನೀಡಿದ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೆ.26 ರಂದು ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಹಿಂಬರಹ ನೀಡಿದ್ದಾರೆ.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya
error: Content is protected !!