September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಬೆಳ್ತಂಗಡಿ: ಗುಂಡೂರಿ ಕಡೆಯಿಂದ ಪಿಕ್ ಅಪ್ ವಾಹನದಲ್ಲಿ ದಿನೇಶ್ ಎಂಬಾತನು ಮರಳು ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ.

ಹೆಚ್ ಸಿ ಕೃಷ್ಣರವರು ಪಿಸಿ ಸಂತೋಷ್ ರವರೊಂದಿಗೆ ಇಲಾಖಾ ಬೈಕ್ನೊಂದಿಗೆ ಹೋಗುತ್ತಿರುವ ಸಂದರ್ಭದಲ್ಲಿ ಪಿಕ್ ಅಪ್ ವಾಹನ ಚಾಲಕ ದಿನೇಶ್ ಎಂಬಾತನು ಪಿಕ್ ಅಪ್ ವಾಹನ ನಿಲ್ಲಿಸಿ ಓಡಿ ತಪ್ಪಿಸಿಕೊಂಡಿದ್ದು, ಪಿಕ್ ಅಪ್ ವಾಹನ ಪರಿಶೀಲಿಸಲಾಗಿ ಸುಮಾರು ರೂ.6 ಸಾವಿರ ಮೌಲ್ಯದ ಒಂದು ಯುನಿಟ್ ನಷ್ಟು ಮರಳು ಪತ್ತೆಯಾಗಿದೆ.

ಆರೋಪಿತನು ಎಲ್ಲಿಂದಲೋ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸಿ ಆತನ ಬಾಬ್ತು ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡಿ ಸರರ್ಕಾರದ ರಾಜಸ್ವಕ್ಕೆ ನಷ್ಟ ಉಂಟು ಮಾಡಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya
error: Content is protected !!