22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ‌ಯ ವತಿಯಿಂದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಕಾರ್ಯಕ್ರಮ ಸೆ 28 ಮತ್ತು 29‌ ರoದು ಜರಗಿತು.

ಸೆ. 28 ರoದು ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಇವರ ನೇತೃತ್ವದಲ್ಲಿ ವಿಶೇಷ ವೈದಿಕ ಕಾರ್ಯಕ್ರಮ ಗಣಪತಿ ಹೋಮ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವರಿಗೆ ರುದ್ರಾಭಿಷೇಕ ದುರ್ಗಾ ದೀಪ ನಮಸ್ಕಾರ ಪೂಜೆ ಭಜನಾ ಕಾರ್ಯಕ್ರಮ ಜರಗಿತು.

ಸೆ. 29 ರoದು ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪನೆ ಬೆಳಗ್ಗಿನ ಮಹಾಪೂಜೆ ಪ್ರಸಾದ ವಿತರಣೆ ಮಧ್ಯಾಹ್ನ ಧಾರ್ಮಿಕ ಸಭೆ ಜರಗಿತು ಧಾರ್ಮಿಕ ಸಭೆಯ ಸಭಾಧ್ಯಕ್ಷತೆಯನ್ನು ಶಾರರ್ದೋತ್ಸವ ಸಮಿತಿಯ ಅಧ್ಯಕ್ಷರಾದ ನಿತೇಶ್ ಕೆ ಓಡಿಲ್ನಾಳ ವಹಿಸಿದ್ದರು‌‌ .

ಧಾರ್ಮಿಕ ಉಪನ್ಯಾಸಕರಾಗಿ ಆಗಮಿಸಿದ ಸಾಮಾಜಿಕ ಚಿಂತಕರು ರಮಿತ ಶೈಲೇಂದ್ರ ಕಾರ್ಕಳ ಮಾತನಾಡಿ ಶಾರದಾ ದೇವಿಯ ಆರಾಧನೆ ದೇವಸ್ಥಾನಗಳಲ್ಲಿ ಅಲ್ಲದೆ ನವರಾತ್ರಿಯ ದಿನಗಳ ಮಹತ್ವದ ಬಗ್ಗೆ ಮನೆ ಮನೆಗಳಲ್ಲಿ ಯುವ ಪೀಳಿಗೆಗಳಿಗೆ ಧಾರ್ಮಿಕತೆಯನ್ನು ಮೂಡಿಸುವಲ್ಲಿ ನಮ್ಮೆಲ್ಲರ ಕರ್ತವ್ಯವಾಗಿದೆ ಎoದರು ಮುಖ್ಯ ಅತಿಥಿಯಾಗಿ ಬರೋಡದ ಉದ್ಯಮಿಗಳಾದ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ.‌ ಮುoಬೈ ಉದ್ಯಮಿಗಳಾದ ಸುರೇಶ್ ಶೆಟ್ಟಿ ಶಬರಿ ಮುಂಗೇಲು.

ನಿವೃತ್ತ ಅಧ್ಯಾಪಕರಾದ ಬೇಬಿ ಸುರೇಶ್ ಬಾಬು ಗುರು ರಾಘವೇಂದ್ರ ಕೃಪ ಪಣೆಜಾಲು ಆಗಮಿಸಿದ್ದರು. ವೇದಿಕೆಯಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರಿಯಾರು, ಶಾರದೋತ್ಸವ ಸಮಿತಿ ಗೌರಾಧ್ಯಕ್ಷ ರಾಮಣ್ಣ ಕೋಲಾಜೆ, ಪ್ರಧಾನ ಕಾರ್ಯದರ್ಶಿ, ಸುದೀಪ್ ಶೆಟ್ಟಿ ಮೂಡೈಲು. ಮಹಿಳಾ ಸಮಿತಿಯ ಅಧ್ಯಕ್ಷ ಭಾರತಿ ಅಡ್ಡ ಕೊಡಂಗೆ, ಭಜನಾ ಸಮಿತಿಯ ಅಧ್ಯಕ್ಷ ಚಿನ್ನಯ್ಯ ಮೂಲ್ಯ ಪರಾರಿ ಉಪಸ್ಥಿತರಿದ್ದರು . ಸುದೀಪ್ ಶೆಟ್ಟಿ ಸ್ವಾಗತಿಸಿ, ನಿತಿನ್ ಬರಾಯ ಕಾರ್ಯಕ್ರಮ ನಿರೂಪಿಸಿದರು. ಭಾರತಿ ಎಸ್ ಶೆಟ್ಟಿ ಧನ್ಯವಾದವಿತ್ತರು. ಮಧ್ಯಾಹ್ನದ ಮಹಾಪೂಜೆ ಪ್ರಸಾದ ವಿತರಣೆ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು. ಸಾಯಂಕಾಲ ಶಾರದಾ ದೇವಿಯ ವಿಸರ್ಜನಾ ಮೆರವಣಿಗೆ ನಡೆಯಲಿದೆ.

Related posts

ಧಮ೯ಸ್ಥಳ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya
error: Content is protected !!