July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ‌ಯ ವತಿಯಿಂದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಕಾರ್ಯಕ್ರಮ ಸೆ 28 ಮತ್ತು 29‌ ರoದು ಜರಗಿತು.

ಸೆ. 28 ರoದು ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಇವರ ನೇತೃತ್ವದಲ್ಲಿ ವಿಶೇಷ ವೈದಿಕ ಕಾರ್ಯಕ್ರಮ ಗಣಪತಿ ಹೋಮ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವರಿಗೆ ರುದ್ರಾಭಿಷೇಕ ದುರ್ಗಾ ದೀಪ ನಮಸ್ಕಾರ ಪೂಜೆ ಭಜನಾ ಕಾರ್ಯಕ್ರಮ ಜರಗಿತು.

ಸೆ. 29 ರoದು ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪನೆ ಬೆಳಗ್ಗಿನ ಮಹಾಪೂಜೆ ಪ್ರಸಾದ ವಿತರಣೆ ಮಧ್ಯಾಹ್ನ ಧಾರ್ಮಿಕ ಸಭೆ ಜರಗಿತು ಧಾರ್ಮಿಕ ಸಭೆಯ ಸಭಾಧ್ಯಕ್ಷತೆಯನ್ನು ಶಾರರ್ದೋತ್ಸವ ಸಮಿತಿಯ ಅಧ್ಯಕ್ಷರಾದ ನಿತೇಶ್ ಕೆ ಓಡಿಲ್ನಾಳ ವಹಿಸಿದ್ದರು‌‌ .

ಧಾರ್ಮಿಕ ಉಪನ್ಯಾಸಕರಾಗಿ ಆಗಮಿಸಿದ ಸಾಮಾಜಿಕ ಚಿಂತಕರು ರಮಿತ ಶೈಲೇಂದ್ರ ಕಾರ್ಕಳ ಮಾತನಾಡಿ ಶಾರದಾ ದೇವಿಯ ಆರಾಧನೆ ದೇವಸ್ಥಾನಗಳಲ್ಲಿ ಅಲ್ಲದೆ ನವರಾತ್ರಿಯ ದಿನಗಳ ಮಹತ್ವದ ಬಗ್ಗೆ ಮನೆ ಮನೆಗಳಲ್ಲಿ ಯುವ ಪೀಳಿಗೆಗಳಿಗೆ ಧಾರ್ಮಿಕತೆಯನ್ನು ಮೂಡಿಸುವಲ್ಲಿ ನಮ್ಮೆಲ್ಲರ ಕರ್ತವ್ಯವಾಗಿದೆ ಎoದರು ಮುಖ್ಯ ಅತಿಥಿಯಾಗಿ ಬರೋಡದ ಉದ್ಯಮಿಗಳಾದ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ.‌ ಮುoಬೈ ಉದ್ಯಮಿಗಳಾದ ಸುರೇಶ್ ಶೆಟ್ಟಿ ಶಬರಿ ಮುಂಗೇಲು.

ನಿವೃತ್ತ ಅಧ್ಯಾಪಕರಾದ ಬೇಬಿ ಸುರೇಶ್ ಬಾಬು ಗುರು ರಾಘವೇಂದ್ರ ಕೃಪ ಪಣೆಜಾಲು ಆಗಮಿಸಿದ್ದರು. ವೇದಿಕೆಯಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರಿಯಾರು, ಶಾರದೋತ್ಸವ ಸಮಿತಿ ಗೌರಾಧ್ಯಕ್ಷ ರಾಮಣ್ಣ ಕೋಲಾಜೆ, ಪ್ರಧಾನ ಕಾರ್ಯದರ್ಶಿ, ಸುದೀಪ್ ಶೆಟ್ಟಿ ಮೂಡೈಲು. ಮಹಿಳಾ ಸಮಿತಿಯ ಅಧ್ಯಕ್ಷ ಭಾರತಿ ಅಡ್ಡ ಕೊಡಂಗೆ, ಭಜನಾ ಸಮಿತಿಯ ಅಧ್ಯಕ್ಷ ಚಿನ್ನಯ್ಯ ಮೂಲ್ಯ ಪರಾರಿ ಉಪಸ್ಥಿತರಿದ್ದರು . ಸುದೀಪ್ ಶೆಟ್ಟಿ ಸ್ವಾಗತಿಸಿ, ನಿತಿನ್ ಬರಾಯ ಕಾರ್ಯಕ್ರಮ ನಿರೂಪಿಸಿದರು. ಭಾರತಿ ಎಸ್ ಶೆಟ್ಟಿ ಧನ್ಯವಾದವಿತ್ತರು. ಮಧ್ಯಾಹ್ನದ ಮಹಾಪೂಜೆ ಪ್ರಸಾದ ವಿತರಣೆ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು. ಸಾಯಂಕಾಲ ಶಾರದಾ ದೇವಿಯ ವಿಸರ್ಜನಾ ಮೆರವಣಿಗೆ ನಡೆಯಲಿದೆ.

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!