30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಪುರಾತನ ಬಸದಿಗಳ ಮಾಹಿತಿಗಳನ್ನು ಕೇಳಿದ್ದು ಕೆಲವೊಂದು ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದು ತಿಳಿದುಬಂದಿದ್ದು ಇದನ್ನು ನಾವು ತೀವ್ರವಾಗಿ ವಿರೋಧಿಸುತಿದ್ದೇವೆ ಎಲ್ಲಾ ಬಸದಿಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿದ್ದು ಜೈನ ಸಮಾಜದ ಶ್ರದ್ದಾ ಕೇಂದ್ರಗಳಾಗಿದ್ದು ಪುರಾತತ್ವ ಇಲಾಖೆ ನಿರ್ಧಾರದಿಂದ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಲಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಅವರಿಗೆ ಮನವಿ ನೀಡಿ ಎಲ್ಲ ಬಸದಿಗಳ ಸ್ಥಳ ಪರಿಶೀಲನೆ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗದಂತೆ ಹಾಗೂ ಪುರಾತತ್ವ ಇಲಾಖೆಗೆ ಸೇರಿಸುವ ಅಗತ್ಯ ಇಲ್ಲದಿರುವ ಬಗ್ಗೆ ಪುರಾತತ್ವ ಇಲಾಖೆಗೆ ವರದಿ ನೀಡಬೇಕಾಗಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಯಶೋಧರ್ ಬಳ್ಳಾಲ್ ಬಂಗಾಡಿ ಅರಮನೆ., ವಿಜಯಕುಮಾರ್ ಸಿದ್ದಾರ್ಥ್ ನಿಲಯ, ಯುವರಾಜ್ ಪೂವಣಿ, ಜಿನರಾಜ ಪೂವಣಿ, ಪಣಿ ರಾಜ್ ಜೈನ್, ಶ್ರೀಮತಿ ಸುರಭಿ, ಅಭಿನಂದನ್, ವೀರೇಂದ್ರ ಜೈನ್, ಸುರೇಂದ್ರ ಕುಮಾರ್ ಧರ್ಮಸ್ಥಳ, ವಿನಯ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya
error: Content is protected !!