25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ ಸೆ. 29ರಂದು ನಡೆಯಿತು.

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ನಿರ್ಮಿಸಿರುವ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಶಾರದಾ ಮಾತೆಯ ವಿಗ್ರಹವನ್ನು ಶಿಕ್ಷಣ ಸಂಸ್ಥೆಗೆ ಉಡುಗೊರೆಯಾಗಿ ನೀಡಿದ್ದರು.ಈ ನಿಟ್ಟಿನಲ್ಲಿ ಸಂಸ್ಥೆಯ ಆವರಣದಲ್ಲಿ ಸುಂದರವಾದ ಪೀಠ ನಿರ್ಮಾಣ ಮಾಡಿ ನವರಾತ್ರಿಯ ಸಂದರ್ಭದಲ್ಲಿ ಪುರೋಹಿತರ ಮೂಲಕ ಪೂಜಾ ಕಾರ್ಯಗಳು ನಡೆದು ಶಾರದಾ ಮಾತೆಯ ಮೂರ್ತಿ ಪೀಠಾರ್ಪಣೆ ನಡೆಯಿತು.

ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಜಯಾನಂದ ಗೌಡ, ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್, ಆಡಳಿತಾಧಿಕಾರಿ ಪ್ರಸಾದ್, ಶಿಕ್ಷಣ ಸಂಸ್ಥೆಯ ನಿರ್ದೇಶಕರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರು, ಪದಾಧಿಕಾರಿಗಳು, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರು ಲಕ್ಷ್ಮೀ ನಾರಾಯಣ್ ಕೆ., ಕಾಲೇಜಿನ ಉಪನ್ಯಾಸಕ ವೃಂದ, ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!