September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಪುರಾತನ ಬಸದಿಗಳ ಮಾಹಿತಿಗಳನ್ನು ಕೇಳಿದ್ದು ಕೆಲವೊಂದು ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದು ತಿಳಿದುಬಂದಿದ್ದು ಇದನ್ನು ನಾವು ತೀವ್ರವಾಗಿ ವಿರೋಧಿಸುತಿದ್ದೇವೆ ಎಲ್ಲಾ ಬಸದಿಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿದ್ದು ಜೈನ ಸಮಾಜದ ಶ್ರದ್ದಾ ಕೇಂದ್ರಗಳಾಗಿದ್ದು ಪುರಾತತ್ವ ಇಲಾಖೆ ನಿರ್ಧಾರದಿಂದ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಲಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಅವರಿಗೆ ಮನವಿ ನೀಡಿ ಎಲ್ಲ ಬಸದಿಗಳ ಸ್ಥಳ ಪರಿಶೀಲನೆ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗದಂತೆ ಹಾಗೂ ಪುರಾತತ್ವ ಇಲಾಖೆಗೆ ಸೇರಿಸುವ ಅಗತ್ಯ ಇಲ್ಲದಿರುವ ಬಗ್ಗೆ ಪುರಾತತ್ವ ಇಲಾಖೆಗೆ ವರದಿ ನೀಡಬೇಕಾಗಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಯಶೋಧರ್ ಬಳ್ಳಾಲ್ ಬಂಗಾಡಿ ಅರಮನೆ., ವಿಜಯಕುಮಾರ್ ಸಿದ್ದಾರ್ಥ್ ನಿಲಯ, ಯುವರಾಜ್ ಪೂವಣಿ, ಜಿನರಾಜ ಪೂವಣಿ, ಪಣಿ ರಾಜ್ ಜೈನ್, ಶ್ರೀಮತಿ ಸುರಭಿ, ಅಭಿನಂದನ್, ವೀರೇಂದ್ರ ಜೈನ್, ಸುರೇಂದ್ರ ಕುಮಾರ್ ಧರ್ಮಸ್ಥಳ, ವಿನಯ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ನಿಡ್ಲೆ: ರಾಧಾಕೃಷ್ಣ ಆಚಾರ್ಯ ನಿಧನ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya
error: Content is protected !!