25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಪುರಾತನ ಬಸದಿಗಳ ಮಾಹಿತಿಗಳನ್ನು ಕೇಳಿದ್ದು ಕೆಲವೊಂದು ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದು ತಿಳಿದುಬಂದಿದ್ದು ಇದನ್ನು ನಾವು ತೀವ್ರವಾಗಿ ವಿರೋಧಿಸುತಿದ್ದೇವೆ ಎಲ್ಲಾ ಬಸದಿಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿದ್ದು ಜೈನ ಸಮಾಜದ ಶ್ರದ್ದಾ ಕೇಂದ್ರಗಳಾಗಿದ್ದು ಪುರಾತತ್ವ ಇಲಾಖೆ ನಿರ್ಧಾರದಿಂದ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಲಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಅವರಿಗೆ ಮನವಿ ನೀಡಿ ಎಲ್ಲ ಬಸದಿಗಳ ಸ್ಥಳ ಪರಿಶೀಲನೆ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗದಂತೆ ಹಾಗೂ ಪುರಾತತ್ವ ಇಲಾಖೆಗೆ ಸೇರಿಸುವ ಅಗತ್ಯ ಇಲ್ಲದಿರುವ ಬಗ್ಗೆ ಪುರಾತತ್ವ ಇಲಾಖೆಗೆ ವರದಿ ನೀಡಬೇಕಾಗಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಯಶೋಧರ್ ಬಳ್ಳಾಲ್ ಬಂಗಾಡಿ ಅರಮನೆ., ವಿಜಯಕುಮಾರ್ ಸಿದ್ದಾರ್ಥ್ ನಿಲಯ, ಯುವರಾಜ್ ಪೂವಣಿ, ಜಿನರಾಜ ಪೂವಣಿ, ಪಣಿ ರಾಜ್ ಜೈನ್, ಶ್ರೀಮತಿ ಸುರಭಿ, ಅಭಿನಂದನ್, ವೀರೇಂದ್ರ ಜೈನ್, ಸುರೇಂದ್ರ ಕುಮಾರ್ ಧರ್ಮಸ್ಥಳ, ವಿನಯ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya
error: Content is protected !!