25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

ಬೆಳ್ತಂಗಡಿ: ಉಚ್ಚಿಲ ಪೇಟೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿ ಬೈಕ್ ಸವಾರ ರಮೇಶ್ ಹೆಗ್ಡೆ (52 ವರ್ಷ) ರವರು ಸಾವನ್ನಪ್ಪಿರುವ ಘಟನೆ ಇಂದು (ಸೆ.30) ಬೆಳಗ್ಗೆ ನಡೆದಿದೆ.

ಘಟನೆ ವಿವರ: ಬೆಳಗ್ಗೆ 6 ಸುಮಾರಿಗೆ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬೈಕ್ ಗೆ ಉಚ್ಚಿಲ ಪೇಟೆಯ ಕೆನರಾ ಬ್ಯಾಂಕಿನ ಎ.ಟಿ.ಎಂ ಮುಂದೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್ ಸವಾರನ ಮೇಲೆ ಬೇರೆ ವಾಹನ ಕೂಡ ಹರಿದು ಹೋಗಿದೆ ಎನ್ನಲಾಗಿದೆ. ಅಂಬ್ಯುಲೆನ್ಸ್ ಮೂಲಕ ಪಡುಬಿದ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ. ಈ ವೇಳೆ ಪಡುಬಿದ್ರೆ ಪೊಲೀಸರು ಹಾಜರಿದ್ದರು. ಉಚ್ಚಿಲ ದಸರಾ ವೇಳೆ ಚರುಂಬುರಿ ವ್ಯಾಪಾರ ನಡೆಸುತ್ತಿದ್ದ ಇವರು ಇಂದು ಊರಿಗೆ ಬರುತ್ತಿರುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!