September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

ಬೆಳ್ತಂಗಡಿ: ಉಚ್ಚಿಲ ಪೇಟೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿ ಬೈಕ್ ಸವಾರ ರಮೇಶ್ ಹೆಗ್ಡೆ (52 ವರ್ಷ) ರವರು ಸಾವನ್ನಪ್ಪಿರುವ ಘಟನೆ ಇಂದು (ಸೆ.30) ಬೆಳಗ್ಗೆ ನಡೆದಿದೆ.

ಘಟನೆ ವಿವರ: ಬೆಳಗ್ಗೆ 6 ಸುಮಾರಿಗೆ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬೈಕ್ ಗೆ ಉಚ್ಚಿಲ ಪೇಟೆಯ ಕೆನರಾ ಬ್ಯಾಂಕಿನ ಎ.ಟಿ.ಎಂ ಮುಂದೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್ ಸವಾರನ ಮೇಲೆ ಬೇರೆ ವಾಹನ ಕೂಡ ಹರಿದು ಹೋಗಿದೆ ಎನ್ನಲಾಗಿದೆ. ಅಂಬ್ಯುಲೆನ್ಸ್ ಮೂಲಕ ಪಡುಬಿದ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ. ಈ ವೇಳೆ ಪಡುಬಿದ್ರೆ ಪೊಲೀಸರು ಹಾಜರಿದ್ದರು. ಉಚ್ಚಿಲ ದಸರಾ ವೇಳೆ ಚರುಂಬುರಿ ವ್ಯಾಪಾರ ನಡೆಸುತ್ತಿದ್ದ ಇವರು ಇಂದು ಊರಿಗೆ ಬರುತ್ತಿರುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya
error: Content is protected !!