25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಳಂಜ: ಸಂಘ-ಸಂಸ್ಥೆಗಳು ಜನಪರವಾಗಿ ತೊಡಗಿಸಿಕೊಂಡು, ಮಾದರಿಯಾಗಿ ಕೆಲಸ ಮಾಡಿದಾಗ ಸುಂದರ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯಚಟುವಟಿಕೆಗಳು ನಿದರ್ಶನವಾಗಿದೆ. ವರ್ಷದೂದ್ದಕ್ಕೂ ಹಲವಾರು ಕಾರ್ಯಕ್ರಮಗಳ ಮೂಲಕ ಶಕ್ತಿ ತುಂಬಿಸುವ ಕೆಲಸ ಮಾಡುತ್ತಿದೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಅವರು ಸೆ.29 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಭೇಟಿ ನೀಡಿ ಮಾತನಾಡಿದರು.

ಸುಮಾರು 47 ವರ್ಷಗಳ ಪರಂಪರೆಯಿರುವ ಬಳಂಜ ಸಂಘದ ಪ್ರಗತಿಯ ಕೆಲಸ ಕಾರ್ಯಗಳಿಗೆ ಸಂಸದರ ನಿಧಿಯಿಂದ ಅನುದಾನ ಮಂಜೂರುಗೊಳಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಬಿಲ್ಲವ ಸಂಘದ ವತಿಯಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅಧ್ಯಕ್ಷತೆ ವಹಿಸಿ,ಸಂಘದ ವಿಚಾರಧಾರೆಗಳನ್ನು ತಿಳಿಸಿ ಸ್ವಾಗತಿಸಿದರು.

ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ,ಪ್ರವೀಣ್ ಕುಮಾರ್ ಹೆಚ್.ಎಸ್,ರಂಜಿತ್ ಪೂಜಾರಿ ಮಜಲಡ್ಡ,ಸುರೇಶ್ ಪೂಜಾರಿ ಜೈಮಾತ,ದಿನೇಶ್ ಪೂಜಾರಿ ಕುದ್ರೋಟ್ಟು,ದಿನೇಶ್ ಪೂಜಾರಿ ಅಂತರ,ದಿನೇಶ್ ಪೂಜಾರಿ ನಿಟ್ಟಡ್ಕ, ಯೋಗೀಶ್ ಪೂಜಾರಿ ಕೊಂಗುಳ,ಸಂತೋಷ್ ಪೂಜಾರಿ, ಭಾರತಿ ಸಂತೋಷ್‌,ಹರೀಶ್ ವೈ, ಹಾಗೂ ಇತರರು ಉಪಸ್ಥಿತರಿದ್ದರು.

ಪತ್ರಕರ್ತ ಜಗದೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು, ಪಂಚಶ್ರೀ ಭಜನಾ ಮಂಡಳಿ ಸದಸ್ಯರು ಸಹಕರಿಸಿದರು.

Related posts

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya
error: Content is protected !!