July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

ಬೆಳ್ತಂಗಡಿ: ಉಚ್ಚಿಲ ಪೇಟೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿ ಬೈಕ್ ಸವಾರ ರಮೇಶ್ ಹೆಗ್ಡೆ (52 ವರ್ಷ) ರವರು ಸಾವನ್ನಪ್ಪಿರುವ ಘಟನೆ ಇಂದು (ಸೆ.30) ಬೆಳಗ್ಗೆ ನಡೆದಿದೆ.

ಘಟನೆ ವಿವರ: ಬೆಳಗ್ಗೆ 6 ಸುಮಾರಿಗೆ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬೈಕ್ ಗೆ ಉಚ್ಚಿಲ ಪೇಟೆಯ ಕೆನರಾ ಬ್ಯಾಂಕಿನ ಎ.ಟಿ.ಎಂ ಮುಂದೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್ ಸವಾರನ ಮೇಲೆ ಬೇರೆ ವಾಹನ ಕೂಡ ಹರಿದು ಹೋಗಿದೆ ಎನ್ನಲಾಗಿದೆ. ಅಂಬ್ಯುಲೆನ್ಸ್ ಮೂಲಕ ಪಡುಬಿದ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ. ಈ ವೇಳೆ ಪಡುಬಿದ್ರೆ ಪೊಲೀಸರು ಹಾಜರಿದ್ದರು. ಉಚ್ಚಿಲ ದಸರಾ ವೇಳೆ ಚರುಂಬುರಿ ವ್ಯಾಪಾರ ನಡೆಸುತ್ತಿದ್ದ ಇವರು ಇಂದು ಊರಿಗೆ ಬರುತ್ತಿರುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya
error: Content is protected !!