25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಳಂಜ: ಸಂಘ-ಸಂಸ್ಥೆಗಳು ಜನಪರವಾಗಿ ತೊಡಗಿಸಿಕೊಂಡು, ಮಾದರಿಯಾಗಿ ಕೆಲಸ ಮಾಡಿದಾಗ ಸುಂದರ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯಚಟುವಟಿಕೆಗಳು ನಿದರ್ಶನವಾಗಿದೆ. ವರ್ಷದೂದ್ದಕ್ಕೂ ಹಲವಾರು ಕಾರ್ಯಕ್ರಮಗಳ ಮೂಲಕ ಶಕ್ತಿ ತುಂಬಿಸುವ ಕೆಲಸ ಮಾಡುತ್ತಿದೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಅವರು ಸೆ.29 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಭೇಟಿ ನೀಡಿ ಮಾತನಾಡಿದರು.

ಸುಮಾರು 47 ವರ್ಷಗಳ ಪರಂಪರೆಯಿರುವ ಬಳಂಜ ಸಂಘದ ಪ್ರಗತಿಯ ಕೆಲಸ ಕಾರ್ಯಗಳಿಗೆ ಸಂಸದರ ನಿಧಿಯಿಂದ ಅನುದಾನ ಮಂಜೂರುಗೊಳಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಬಿಲ್ಲವ ಸಂಘದ ವತಿಯಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅಧ್ಯಕ್ಷತೆ ವಹಿಸಿ,ಸಂಘದ ವಿಚಾರಧಾರೆಗಳನ್ನು ತಿಳಿಸಿ ಸ್ವಾಗತಿಸಿದರು.

ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ,ಪ್ರವೀಣ್ ಕುಮಾರ್ ಹೆಚ್.ಎಸ್,ರಂಜಿತ್ ಪೂಜಾರಿ ಮಜಲಡ್ಡ,ಸುರೇಶ್ ಪೂಜಾರಿ ಜೈಮಾತ,ದಿನೇಶ್ ಪೂಜಾರಿ ಕುದ್ರೋಟ್ಟು,ದಿನೇಶ್ ಪೂಜಾರಿ ಅಂತರ,ದಿನೇಶ್ ಪೂಜಾರಿ ನಿಟ್ಟಡ್ಕ, ಯೋಗೀಶ್ ಪೂಜಾರಿ ಕೊಂಗುಳ,ಸಂತೋಷ್ ಪೂಜಾರಿ, ಭಾರತಿ ಸಂತೋಷ್‌,ಹರೀಶ್ ವೈ, ಹಾಗೂ ಇತರರು ಉಪಸ್ಥಿತರಿದ್ದರು.

ಪತ್ರಕರ್ತ ಜಗದೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು, ಪಂಚಶ್ರೀ ಭಜನಾ ಮಂಡಳಿ ಸದಸ್ಯರು ಸಹಕರಿಸಿದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya
error: Content is protected !!