September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಳಂಜ: ಸಂಘ-ಸಂಸ್ಥೆಗಳು ಜನಪರವಾಗಿ ತೊಡಗಿಸಿಕೊಂಡು, ಮಾದರಿಯಾಗಿ ಕೆಲಸ ಮಾಡಿದಾಗ ಸುಂದರ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯಚಟುವಟಿಕೆಗಳು ನಿದರ್ಶನವಾಗಿದೆ. ವರ್ಷದೂದ್ದಕ್ಕೂ ಹಲವಾರು ಕಾರ್ಯಕ್ರಮಗಳ ಮೂಲಕ ಶಕ್ತಿ ತುಂಬಿಸುವ ಕೆಲಸ ಮಾಡುತ್ತಿದೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಅವರು ಸೆ.29 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಭೇಟಿ ನೀಡಿ ಮಾತನಾಡಿದರು.

ಸುಮಾರು 47 ವರ್ಷಗಳ ಪರಂಪರೆಯಿರುವ ಬಳಂಜ ಸಂಘದ ಪ್ರಗತಿಯ ಕೆಲಸ ಕಾರ್ಯಗಳಿಗೆ ಸಂಸದರ ನಿಧಿಯಿಂದ ಅನುದಾನ ಮಂಜೂರುಗೊಳಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಬಿಲ್ಲವ ಸಂಘದ ವತಿಯಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅಧ್ಯಕ್ಷತೆ ವಹಿಸಿ,ಸಂಘದ ವಿಚಾರಧಾರೆಗಳನ್ನು ತಿಳಿಸಿ ಸ್ವಾಗತಿಸಿದರು.

ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ,ಪ್ರವೀಣ್ ಕುಮಾರ್ ಹೆಚ್.ಎಸ್,ರಂಜಿತ್ ಪೂಜಾರಿ ಮಜಲಡ್ಡ,ಸುರೇಶ್ ಪೂಜಾರಿ ಜೈಮಾತ,ದಿನೇಶ್ ಪೂಜಾರಿ ಕುದ್ರೋಟ್ಟು,ದಿನೇಶ್ ಪೂಜಾರಿ ಅಂತರ,ದಿನೇಶ್ ಪೂಜಾರಿ ನಿಟ್ಟಡ್ಕ, ಯೋಗೀಶ್ ಪೂಜಾರಿ ಕೊಂಗುಳ,ಸಂತೋಷ್ ಪೂಜಾರಿ, ಭಾರತಿ ಸಂತೋಷ್‌,ಹರೀಶ್ ವೈ, ಹಾಗೂ ಇತರರು ಉಪಸ್ಥಿತರಿದ್ದರು.

ಪತ್ರಕರ್ತ ಜಗದೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು, ಪಂಚಶ್ರೀ ಭಜನಾ ಮಂಡಳಿ ಸದಸ್ಯರು ಸಹಕರಿಸಿದರು.

Related posts

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya
error: Content is protected !!