23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ದಿನೇಶ್ ಎಂ ಇವರು 31 ವರ್ಷಗಳ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.


ಊರಿನ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಇವರು 1990 ರಲ್ಲಿ ಮುಂದುವರಿಕಾ ಧರ್ಮಸ್ಥಳ ಶಿಕ್ಷಣ ಕೇಂದ್ರದ ಪ್ರೇರಕರಾಗಿ ಕೆಲಸವನ್ನು ಮಾಡಿದ್ದು 1994ರಿಂದ ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಬಿಲ್ ಕಲೆಕ್ಟರ್ ,ಕ್ಲರ್ಕ್ ಕೆಲಸವನ್ನು ನಿರ್ವಹಿಸಿ 2012 ಮುಂಬಡ್ತಿ ಹೊಂದಿ ಗ್ರಾಮ ಪಂಚಾಯತಿ ಲೆಕ್ಕ ಸಹಾಯಕರಾಗಿ ಹಾಗೂ 2020ರಲ್ಲಿ ಗ್ರೇಡ್ -1 ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಕಬಕ ಹಾಗೂ ಉಪ್ಪಿನಂಗಡಿಯಲ್ಲಿ ಸೇವೆ ಸಲ್ಲಿಸಿದರು.

2023 ರಿಂದ ಧರ್ಮಸ್ಥಳ ಗ್ರೇಡ್ -1 ಕಾರ್ಯದರ್ಶಿಯಾಗಿ, 2024 ರಿಂದ ಧರ್ಮಸ್ಥಳ ಹಾಗೂ ಶಿಶಿಲ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 2023 ರಿಂದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ 2ವರ್ಷ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.


ಇವರು ನಿಡ್ಲೆ ಗ್ರಾಮದ ಮಜಲಿ ಮಾರು ದೇವಣ್ಣ ಗೌಡ ಮತ್ತು ತೇಜಮ್ಮ ಇವರ ಪುತ್ರರಾಗಿದ್ದು ಪ್ರಗತಿಪರ ಕೃಷಿಕರು ಕೂಡಾ ಆಗಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ನಿಡ್ಲೆಯಲ್ಲಿ ಪೂರೈಸಿದ ಇವರು ಉಜಿರೆ ಶ್ರೀ ಮಂಜುನಾಥೇಶ್ವರ ಕಾಲೇಜಿನಲ್ಲಿ ಪದವಿಯನ್ನು ಪಡೆದಿರುತ್ತಾರೆ. ಯಕ್ಷಗಾನ ಹಾಗೂ ನಾಟಕದ ಹವ್ಯಾಸವನ್ನು ಹೊಂದಿರುವ ಇವರು ಹಾಸ್ಯ ಕಲಾವಿದರಾಗಿದ್ದಾರೆ. ಇವರ ನಿವೃತ್ತಿ ಜೀವನ ಸುಖಮಯವಾಗಿರಲೆಂದು ಧರ್ಮಸ್ಥಳ, ಶಿಶಿಲ, ಉಪ್ಪಿನಂಗಡಿ, ಕಬಕ ಗ್ರಾಮಸ್ಥರು ಶುಭ ಹಾರೈಸಿದ್ದಾರೆ.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya
error: Content is protected !!