September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ : ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಲಾಗಿದೆ.

ಚಿಬಿದ್ರೆ ನಿವಾಸಿ ವೀರಪ್ಪ ಗೌಡ ಮಗ ತಮ್ಮಯ್ಯ (35) ಬಂಧಿತ ಆರೋಪಿ. ಸೆ.28 ರಂದು ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಈತ ತಿರುಗಾಡುತ್ತಿದ್ದವನನ್ನು ನೋಡಿ ಸುರತ್ಕಲ್ ಪೊಲೀಸ್ ಠಾಣೆಯ ಉಮೇಶ್ ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಿಬಿದ್ರೆ ನಿವಾಸಿ ಎಂದು ತಿಳಿಸಿದ್ದ. ಅದರಂತೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ ಸುರತ್ಕಲ್ ಪೊಲೀಸ್ ಠಾಣೆಗೆ ತೆರಳಿ ವಿಚಾರಿಸಿದಾಗ ವಾರಂಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ತಮ್ಮಯ್ಯ ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಮತ್ತು ಉಪ ನಿರೀಕ್ಷಕರು ಸಮರ್ಥ್ ಆರ್ ಗಾಣಿಗೇರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವೃಷಭ, ಚರಣ್ ರಾಜ್, ಗೋವಿಂದರಾಜ್, ಜಗದೀಶ್ ರವರು ಬಂಧಿಸಿ ಸೆ.29 ರಂದು ಸುಳ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya
error: Content is protected !!