24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ : ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಲಾಗಿದೆ.

ಚಿಬಿದ್ರೆ ನಿವಾಸಿ ವೀರಪ್ಪ ಗೌಡ ಮಗ ತಮ್ಮಯ್ಯ (35) ಬಂಧಿತ ಆರೋಪಿ. ಸೆ.28 ರಂದು ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಈತ ತಿರುಗಾಡುತ್ತಿದ್ದವನನ್ನು ನೋಡಿ ಸುರತ್ಕಲ್ ಪೊಲೀಸ್ ಠಾಣೆಯ ಉಮೇಶ್ ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಿಬಿದ್ರೆ ನಿವಾಸಿ ಎಂದು ತಿಳಿಸಿದ್ದ. ಅದರಂತೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ ಸುರತ್ಕಲ್ ಪೊಲೀಸ್ ಠಾಣೆಗೆ ತೆರಳಿ ವಿಚಾರಿಸಿದಾಗ ವಾರಂಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ತಮ್ಮಯ್ಯ ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಮತ್ತು ಉಪ ನಿರೀಕ್ಷಕರು ಸಮರ್ಥ್ ಆರ್ ಗಾಣಿಗೇರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವೃಷಭ, ಚರಣ್ ರಾಜ್, ಗೋವಿಂದರಾಜ್, ಜಗದೀಶ್ ರವರು ಬಂಧಿಸಿ ಸೆ.29 ರಂದು ಸುಳ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಕೇಂದ್ರ ಬಜೆಟ್ 2026-2027:ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್: ಹರೀಶ್ ಪೂಂಜ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!