22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

ಬೆಳ್ತಂಗಡಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಿಲಿ ಮುಂಬೈ ಇದರ 61 ನೇ ವರ್ಷದ ಶಾರದೋತ್ಸವದ ಭವ್ಯ ಶೋಭಯಾತ್ರೆಯು ಅ. 2 ರಂದು ನಡೆಯಲಿದ್ದು.

ಈ ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಜಡೇಕೋಲಾಟ, ಕಂಸಾಲೆ ನೃತ್ಯ ಪ್ರದರ್ಶನ ನೀಡಲು ಭಕ್ತಿ ಹೆಜ್ಜೆ ಬಳಗಕ್ಕೆ ಪ್ರಾಯೋಜಕತ್ವ ನೀಡಿ ಸಮಿತಿಯವರು ಆಹ್ವಾನ ನೀಡಿದ್ದು ಇದರಂತೆ ಕುಣಿತ ಭಜನಾ ಗುರುಗಳು ಮತ್ತು ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ ಸಂಚಾಲಕರಾದ ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ 62 ಭಜಕ ಸದಸ್ಯರು ಮುಂಬೈ ಗೆ ತೆರಳಲಿದ್ದಾರೆ. ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು ಅ. 2 ರಂದು ಶಾರದೋ ತ್ಸವದ ಶೋಭಯಾತ್ರೆ, ಅ.3 ರಂದು ನಿತ್ಯಾ ನಂದ ಮಂದಿರ ಗಣೇಶ್ ಪುರಿ ಮುಂಬೈ ಹಾಗೂ ಮಹಾಲಕ್ಷ್ಮಿ ದೇವಸ್ಥಾನ ಘನ್ಸೋಲಿ ಮುಂಬೈ ಯಲ್ಲಿ ಕುಣಿತ ಭಜನಾ ಸೇವೆ ನೀಡಿ ಅಕ್ಟೋಬರ್ 4 ರಂದು ಮುಂಬೈ ಯ ಪ್ರಸಿದ್ದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.

Related posts

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya
error: Content is protected !!