23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

ಬೆಳ್ತಂಗಡಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಿಲಿ ಮುಂಬೈ ಇದರ 61 ನೇ ವರ್ಷದ ಶಾರದೋತ್ಸವದ ಭವ್ಯ ಶೋಭಯಾತ್ರೆಯು ಅ. 2 ರಂದು ನಡೆಯಲಿದ್ದು.

ಈ ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಜಡೇಕೋಲಾಟ, ಕಂಸಾಲೆ ನೃತ್ಯ ಪ್ರದರ್ಶನ ನೀಡಲು ಭಕ್ತಿ ಹೆಜ್ಜೆ ಬಳಗಕ್ಕೆ ಪ್ರಾಯೋಜಕತ್ವ ನೀಡಿ ಸಮಿತಿಯವರು ಆಹ್ವಾನ ನೀಡಿದ್ದು ಇದರಂತೆ ಕುಣಿತ ಭಜನಾ ಗುರುಗಳು ಮತ್ತು ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ ಸಂಚಾಲಕರಾದ ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ 62 ಭಜಕ ಸದಸ್ಯರು ಮುಂಬೈ ಗೆ ತೆರಳಲಿದ್ದಾರೆ. ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು ಅ. 2 ರಂದು ಶಾರದೋ ತ್ಸವದ ಶೋಭಯಾತ್ರೆ, ಅ.3 ರಂದು ನಿತ್ಯಾ ನಂದ ಮಂದಿರ ಗಣೇಶ್ ಪುರಿ ಮುಂಬೈ ಹಾಗೂ ಮಹಾಲಕ್ಷ್ಮಿ ದೇವಸ್ಥಾನ ಘನ್ಸೋಲಿ ಮುಂಬೈ ಯಲ್ಲಿ ಕುಣಿತ ಭಜನಾ ಸೇವೆ ನೀಡಿ ಅಕ್ಟೋಬರ್ 4 ರಂದು ಮುಂಬೈ ಯ ಪ್ರಸಿದ್ದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.

Related posts

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಹೊಸಂಗಡಿ: ಕಲ್ಯಾಣಿ ನಿಧನ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya
error: Content is protected !!