25.5 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜು

ಸ.ಪ್ರ.ದ. ಕಾಲೇಜು ಬೆಳ್ತಂಗಡಿಯಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನವಯುವ ಕಾರ್ಯಕ್ರಮ

ಬೆಳ್ತಂಗಡಿ:ಸೆ 30.ರಂದು ಸ.ಪ್ರ.ದ. ಕಾಲೇಜು ಬೆಳ್ತಂಗಡಿಯಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನವಯುವ ಹೆಸರಿನಲ್ಲಿ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ ಇವರು ಹಿಂದಿನ ಕಾಲದಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯುವುದು ತುಂಬಾ ಕಷ್ಟವಾಗಿತ್ತು ಆದರೆ ಇಂದು ನೀವುಗಳು ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದು ಅದರ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಕಾಲೇಜಿನಲ್ಲಿರುವ ಎಲ್ಲ ಸಂಪನ್ಮೂಲಗಳನ್ನು ಸಮರ್ಪಕವಾಗಿ

ಬಳಸಿಕೊಳ್ಳಲು ತಿಳಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಪ್ರೊಫೆಸರ್ ಪದ್ಮನಾಭ ಕೆ. ಇವರು ಮಾತನಾಡಿ ವಿದ್ಯಾರ್ಥಿಗಳು ನಿಮಗೆ ಸಿಕ್ಕ ಅವಕಾಶಗಳನ್ನು ಬಿಡದೆ ಅವಕಾಶಗಳ ಬೆನ್ನು ಹತ್ತಬೇಕು ಎಂದು ತಿಳಿಸಿದರು. ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ರವಿ ಎಂ. ಎನ್. ಇವರು ಮಾತನಾಡಿ ಪಠ್ಯಕ್ರಮದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಾಗ ಮಾತ್ರ ನಮ್ಮ ಸರ್ವತೋಮುಖ ಅಭಿವೃದ್ಧಿಗೆ ಅವಕಾಶ ಸಿಗುತ್ತದೆ ಎಂದು ತಿಳಿಸಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥರು ಹಾಗೂ ಉದ್ಯೋಗ ಮಾಹಿತಿ ಕೇಂದ್ರದ ಸಂಚಾಲಕರಾದ ಪ್ರೊಫೆಸರ್ ರಶ್ಮಿ ಅವರು ವಿದ್ಯಾರ್ಥಿಗಳು ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಕೌಶಲ್ಯಗಳನ್ನು ಬಳಸಿಕೊಂಡು ನಮ್ಮ ಶಿಕ್ಷಣ ಮುಗಿಯುವ ಹಂತದಲ್ಲಿ ಉದ್ಯೋಗವನ್ನು ಪಡೆಯುವಲ್ಲಿ ಯಶಸ್ವಿಯಾಗಬೇಕು ಎಂದು ತಿಳಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಮಾರುತಿ ಜಿ ಇವರು ನಾವೆಲ್ಲರೂ ನಮ್ಮ ತರಗತಿಗಳ ಜೊತೆಗೆ ಕಾಲೇಜಿನಲ್ಲಿ ದೊರೆಯುವ ಹಾಗೂ ಮೊಬೈಲ್ನಲ್ಲಿ ಸಿಗುವಂತ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕೆಂದು ತಿಳಿಸಿದರು. ಸ್ನಾತಕೋತ್ತರ ವಿಭಾಗದ ಪ್ರತಿನಿಧಿಗಳಾದ ಶ್ರೀ ನಿತಿನ್ ಶೆಟ್ಟಿ ಹಾಗೂ ಕುಮಾರಿ ವೈಷ್ಣವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂತಿಮ ಎಂ ಕಾಂನ ವಿದ್ಯಾರ್ಥಿನಿ ಕು. ಅಂಕಿತ ಸ್ವಾಗತಿಸಿ, ಕು. ಚೈತ್ರ ಇವರು ವಂದನಾರ್ಪಣೆ ಗೈದರು. ಕು. ಪೂರ್ಣಿಮಾ ಹಾಗೂ ಕು. ವನಿತಾ ಪ್ರಾರ್ಥಿಸಿ, ಕು. ವಾಣಿ ಇವರು ಕಾರ್ಯಕ್ರಮ ನಿರೂಪಿಸಿದರು.

Related posts

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ: ಎಸ್.ಡಿ.ಎಂ. ಪಿಯು ಕಾಲೇಜಿನ 24 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ

Suddi Udaya
error: Content is protected !!