September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

ಬೆಳ್ತಂಗಡಿ: ಉಚ್ಚಿಲ ಪೇಟೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿ ಬೈಕ್ ಸವಾರ ರಮೇಶ್ ಹೆಗ್ಡೆ (52 ವರ್ಷ) ರವರು ಸಾವನ್ನಪ್ಪಿರುವ ಘಟನೆ ಇಂದು (ಸೆ.30) ಬೆಳಗ್ಗೆ ನಡೆದಿದೆ.

ಘಟನೆ ವಿವರ: ಬೆಳಗ್ಗೆ 6 ಸುಮಾರಿಗೆ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬೈಕ್ ಗೆ ಉಚ್ಚಿಲ ಪೇಟೆಯ ಕೆನರಾ ಬ್ಯಾಂಕಿನ ಎ.ಟಿ.ಎಂ ಮುಂದೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್ ಸವಾರನ ಮೇಲೆ ಬೇರೆ ವಾಹನ ಕೂಡ ಹರಿದು ಹೋಗಿದೆ ಎನ್ನಲಾಗಿದೆ. ಅಂಬ್ಯುಲೆನ್ಸ್ ಮೂಲಕ ಪಡುಬಿದ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ. ಈ ವೇಳೆ ಪಡುಬಿದ್ರೆ ಪೊಲೀಸರು ಹಾಜರಿದ್ದರು. ಉಚ್ಚಿಲ ದಸರಾ ವೇಳೆ ಚರುಂಬುರಿ ವ್ಯಾಪಾರ ನಡೆಸುತ್ತಿದ್ದ ಇವರು ಇಂದು ಊರಿಗೆ ಬರುತ್ತಿರುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!