23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ದಿನೇಶ್ ಎಂ ಇವರು 31 ವರ್ಷಗಳ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.


ಊರಿನ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಇವರು 1990 ರಲ್ಲಿ ಮುಂದುವರಿಕಾ ಧರ್ಮಸ್ಥಳ ಶಿಕ್ಷಣ ಕೇಂದ್ರದ ಪ್ರೇರಕರಾಗಿ ಕೆಲಸವನ್ನು ಮಾಡಿದ್ದು 1994ರಿಂದ ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಬಿಲ್ ಕಲೆಕ್ಟರ್ ,ಕ್ಲರ್ಕ್ ಕೆಲಸವನ್ನು ನಿರ್ವಹಿಸಿ 2012 ಮುಂಬಡ್ತಿ ಹೊಂದಿ ಗ್ರಾಮ ಪಂಚಾಯತಿ ಲೆಕ್ಕ ಸಹಾಯಕರಾಗಿ ಹಾಗೂ 2020ರಲ್ಲಿ ಗ್ರೇಡ್ -1 ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಕಬಕ ಹಾಗೂ ಉಪ್ಪಿನಂಗಡಿಯಲ್ಲಿ ಸೇವೆ ಸಲ್ಲಿಸಿದರು.

2023 ರಿಂದ ಧರ್ಮಸ್ಥಳ ಗ್ರೇಡ್ -1 ಕಾರ್ಯದರ್ಶಿಯಾಗಿ, 2024 ರಿಂದ ಧರ್ಮಸ್ಥಳ ಹಾಗೂ ಶಿಶಿಲ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 2023 ರಿಂದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ 2ವರ್ಷ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.


ಇವರು ನಿಡ್ಲೆ ಗ್ರಾಮದ ಮಜಲಿ ಮಾರು ದೇವಣ್ಣ ಗೌಡ ಮತ್ತು ತೇಜಮ್ಮ ಇವರ ಪುತ್ರರಾಗಿದ್ದು ಪ್ರಗತಿಪರ ಕೃಷಿಕರು ಕೂಡಾ ಆಗಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ನಿಡ್ಲೆಯಲ್ಲಿ ಪೂರೈಸಿದ ಇವರು ಉಜಿರೆ ಶ್ರೀ ಮಂಜುನಾಥೇಶ್ವರ ಕಾಲೇಜಿನಲ್ಲಿ ಪದವಿಯನ್ನು ಪಡೆದಿರುತ್ತಾರೆ. ಯಕ್ಷಗಾನ ಹಾಗೂ ನಾಟಕದ ಹವ್ಯಾಸವನ್ನು ಹೊಂದಿರುವ ಇವರು ಹಾಸ್ಯ ಕಲಾವಿದರಾಗಿದ್ದಾರೆ. ಇವರ ನಿವೃತ್ತಿ ಜೀವನ ಸುಖಮಯವಾಗಿರಲೆಂದು ಧರ್ಮಸ್ಥಳ, ಶಿಶಿಲ, ಉಪ್ಪಿನಂಗಡಿ, ಕಬಕ ಗ್ರಾಮಸ್ಥರು ಶುಭ ಹಾರೈಸಿದ್ದಾರೆ.

Related posts

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!