September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ದಿನೇಶ್ ಎಂ ಇವರು 31 ವರ್ಷಗಳ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.


ಊರಿನ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಇವರು 1990 ರಲ್ಲಿ ಮುಂದುವರಿಕಾ ಧರ್ಮಸ್ಥಳ ಶಿಕ್ಷಣ ಕೇಂದ್ರದ ಪ್ರೇರಕರಾಗಿ ಕೆಲಸವನ್ನು ಮಾಡಿದ್ದು 1994ರಿಂದ ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಬಿಲ್ ಕಲೆಕ್ಟರ್ ,ಕ್ಲರ್ಕ್ ಕೆಲಸವನ್ನು ನಿರ್ವಹಿಸಿ 2012 ಮುಂಬಡ್ತಿ ಹೊಂದಿ ಗ್ರಾಮ ಪಂಚಾಯತಿ ಲೆಕ್ಕ ಸಹಾಯಕರಾಗಿ ಹಾಗೂ 2020ರಲ್ಲಿ ಗ್ರೇಡ್ -1 ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಕಬಕ ಹಾಗೂ ಉಪ್ಪಿನಂಗಡಿಯಲ್ಲಿ ಸೇವೆ ಸಲ್ಲಿಸಿದರು.

2023 ರಿಂದ ಧರ್ಮಸ್ಥಳ ಗ್ರೇಡ್ -1 ಕಾರ್ಯದರ್ಶಿಯಾಗಿ, 2024 ರಿಂದ ಧರ್ಮಸ್ಥಳ ಹಾಗೂ ಶಿಶಿಲ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 2023 ರಿಂದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ 2ವರ್ಷ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.


ಇವರು ನಿಡ್ಲೆ ಗ್ರಾಮದ ಮಜಲಿ ಮಾರು ದೇವಣ್ಣ ಗೌಡ ಮತ್ತು ತೇಜಮ್ಮ ಇವರ ಪುತ್ರರಾಗಿದ್ದು ಪ್ರಗತಿಪರ ಕೃಷಿಕರು ಕೂಡಾ ಆಗಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ನಿಡ್ಲೆಯಲ್ಲಿ ಪೂರೈಸಿದ ಇವರು ಉಜಿರೆ ಶ್ರೀ ಮಂಜುನಾಥೇಶ್ವರ ಕಾಲೇಜಿನಲ್ಲಿ ಪದವಿಯನ್ನು ಪಡೆದಿರುತ್ತಾರೆ. ಯಕ್ಷಗಾನ ಹಾಗೂ ನಾಟಕದ ಹವ್ಯಾಸವನ್ನು ಹೊಂದಿರುವ ಇವರು ಹಾಸ್ಯ ಕಲಾವಿದರಾಗಿದ್ದಾರೆ. ಇವರ ನಿವೃತ್ತಿ ಜೀವನ ಸುಖಮಯವಾಗಿರಲೆಂದು ಧರ್ಮಸ್ಥಳ, ಶಿಶಿಲ, ಉಪ್ಪಿನಂಗಡಿ, ಕಬಕ ಗ್ರಾಮಸ್ಥರು ಶುಭ ಹಾರೈಸಿದ್ದಾರೆ.

Related posts

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!