September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ವಾರ್ಷಿಕ ಮಹಾಸಭೆಯು ಸೆ.30 ರಂದು ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಂದ್ರಕಾಂತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಒಕ್ಕೂಟದ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರು ಸೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಸ್ತಾವಿಕವಾಗಿ ತಾಲೂಕು ಬ್ಲಾಕ್ ಮ್ಯಾನೇಜರ್ ನಿತೀಶ್ ಮಾತನಾಡಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM) ಬಗ್ಗೆ, ಬ್ಯಾಂಕ್ ಸಾಲದ ಬಗ್ಗೆ, ವಿಮೆಯ ಬಗ್ಗೆ, ಸಂಜೀವಿನಿ ಯೋಜನೆಯ ಬಗ್ಗೆ ಸಮುದಾಯ ಬಂಡವಾಳ ನಿಧಿಯಿಂದ ಮಹಿಳೆಯರು ವಿವಿಧ ಆಹಾರೋತ್ಪನ್ನ ಚಟುವಟಿಕೆ ನಡೆಸಬೇಕು. ಆರ್ಥಿಕ ಮಟ್ಟ ಏರಿಕೆಯಾಗಬೇಕು. PMFME ಸಾಲ ಸೌಲಭ್ಯ ಮನೆಯಲ್ಲಿ ತಯಾರಿಸುವ ಉತ್ಪನ್ನಗಳಿಗೆ FSSAI ಸರ್ಟಿಫಿಕೇಟ್ ಮಾಡಿಕೊಡುವ ಬಗ್ಗೆ ಸವಿಸ್ತಾರವಾಗಿ ತಿಳಿಸಿ ಕೊಟ್ಟರು.

ಶ್ರೀಮತಿ ಶ್ರುತಿಯವರು 2024-2ರ ಸಾಲಿನ ವಾರ್ಷಿಕ ವರದಿ ಮತ್ತು ಜಮಾ ಖರ್ಚು ಮಂಡಿಸಿದರು. BRPPRI ಯಾದ ಶ್ರೀಕಲಾ VPRPಯ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಮಾದಕ ವ್ಯಸನ ಮುಕ್ತ ಪ್ರತಿಜ್ಞೆ ಮಾಡಲಾಯಿತು. ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ಮಾತನಾಡಿ ಒಕ್ಕೂಟವು ಇನ್ನಷ್ಟು ಲಾಭಯುತವಾಗಿ ಮುನ್ನಡೆಯಲೆಂದು ಶುಭ ಹಾರೈಸಿದರು. ಅದೃಷ್ಟ ಮಹಿಳೆಯರು ಗೇಮ್ ಆಯೋಜಿಸಿ ಅದೃಷ್ಟ ಮೂವರು ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ರಸಪ್ರಶ್ನೆ ಆಯೋಜಿಸಲಾಗಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಿರ್ಗಮಿತ ಪದಾಧಿಕಾರಿಗಳಿಗೆ ಗೌರವ ಸ್ಮರಣಿಕೆ ನೀಡಲಾಯಿತು. ಸಭಾಧ್ಯಕ್ಷತೆಯನ್ನು ವಹಿಸಿಕೊಂಡ ಒಕ್ಕೂಟದ ಅಧ್ಯಕ್ಷ ಮಾತನಾಡಿ ತನ್ನ ಅವಧಿಯಲ್ಲಿನ ಅನುಭವವನ್ನು ಹಂಚಿಕೊಂಡರು.

ಒಕ್ಕೂಟದ ಸದಸ್ಯರಾದ ವಾರಿಜ ಭಕ್ತಿಗೀತೆ ಹಾಡಿದರು. ರೋಹಿಣಿ ಸ್ವಾಗತಿಸಿದರು. ಸೌಮ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಪಶು ಸಖಿ ರೇವತಿ ಧನ್ಯವಾದವಿತ್ತರು.

Related posts

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya
error: Content is protected !!