23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

ವಂಶಪಾರಂಪರ್ಯ ಆಯುರ್ವೇದ ಪಂಡಿತ, ನಾಡಿ ತಜ್ಞ, ‘ ಕರ್ನಾಟಕ ವೈದ್ಯರತ್ನ’ ಪ್ರಶಸ್ತಿ ಪುರಸ್ಕೃತ ಡಾ| ಸಲೀಂ ಗರ್ಡಾಡಿ ಅವರಿಗೆ ‘ ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ‘ ಲಭಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿಕಾರಿಪುರ ತಾಲೂಕು ಪಂಚಾಯತ್, ಗೊದ್ದನಕೊಪ್ಪ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ‘ಜಾನಪದ ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.


ಮೂಡುಬಿದಿರೆ ಸಮೀಪದ ಗರ್ಡಾಡಿಯವರಾಗಿದ್ದು ಮೂಡುಬಿದಿರೆಯಲ್ಲಿ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಹೊಂದಿರುವ ವೈದ್ಯ ಎಂ.ಕೆ.ಗರ್ಡಾಡಿ ಅವರ ಪುತ್ರರಾಗಿರುವ ಸಲೀಂ ಗರ್ಡಾಡಿ ಅವರು ಪ್ರಸ್ತುತ ಚಿಕ್ಕಮಗಳೂರಿನಲ್ಲಿ ಅಮೃತ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಮುಂದುವರಿಸುತ್ತಿದ್ದಾರೆ.


ವಂಶಪಾರಂಪರ್ಯ ಆಯುರ್ವೇದ ಕ್ಷೇತ್ರದಲ್ಲಿ ಎಲೆಮರೆಕಾಯಿಯಂತೆ ಗಣನೀಯ ಸೇವೆ ಸಲ್ಲಿಸಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Related posts

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya
error: Content is protected !!