September 6, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

ತೋಟತ್ತಾಡಿ : ಧರ್ಮರಕ್ಷಾ ವೇದಿಕೆ, ತೋಟತ್ತಾಡಿ ಇದರ ಆಶ್ರಯದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಸೆ 29 ರಂದು ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ SNDP ಶಾಖೆ, ಬೆಂದ್ರಾಳ ತೋಟತ್ತಾಡಿಯಲ್ಲಿ, ನಡೆಯಿತು.

ಬೆಳಿಗ್ಗೆ ವೇದಮೂರ್ತಿ ಶ್ರೀ ವಾದಿರಾಜ ಶಬರಾಯ ಉಜಿರೆ ಇವರ ಪೌರೋಹಿತ್ಯದಲ್ಲಿ,”ಗಣಹೋಮ ಹಾಗೂ ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠೆ”.ನಂತರ ಆಹ್ವಾನಿತ ವಿವಿಧ ಭಜನಾ ತಂಡಗಳಿಂದ ಭಜನೆ, ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಕ್ಸೆಲ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ| ಪ್ರಜ್ವಲ್ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡುತ್ತಾ ಧಾರ್ಮಿಕ ಆಚರಣೆಗಳು ಸನಾತನ ಸಂಸ್ಕೃತಿಯ ಪ್ರತೀಕ, ಮತ್ತು ನಾವು ದಿನನಿತ್ಯದ ಬದುಕಿನಲ್ಲಿ ಉತ್ತಮ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಂಡು,ನಾಗರಿಕ ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದರು‌.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡರು ಹಾಗೂ ಉದ್ಯಮಿಗಳಾದ ಕಿರಣ್ ಚಂದ್ರ ಪುಷ್ಪಗಿರಿ ಮಾತನಾಡಿ ಶಾರದಾ ಪೂಜೋತ್ಸವವು ಶ್ರೀ ಶಾರದಾ ದೇವಿಯು ವಿದ್ಯೆ,ಸಮೃದ್ಧಿಯ ಸಂಕೇತ, ನವರಾತ್ರಿ ಆಚರಣೆಯು ಯುವ ಸಮಾಜವನ್ನು ಸಂಘಟಿತರನ್ನಾಗಿ ಮಾಡುತ್ತದೆ ಎಂದರು.

ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ನವರಾತ್ರಿ ಆಚರಣೆಯ ಮಹತ್ವ ವಿವರಿಸಿದರು, ಕಾರ್ಯಕ್ರಮದಲ್ಲಿ ಚಾರ್ಮಾಡಿ ಗ್ರಾಂ ಪಂ ಅಧ್ಯಕ್ಷೆ ಶ್ರೀಮತಿ ಶಾರದಾ ಎ, ನಾರಾಯಣ ಗುರು ಎಸ್.ಎನ್.ಡಿ.ಪಿ ಸಂಘದ ಅಧ್ಯಕ್ಷ ಶ್ರೀ ಸುರೇಶ್ ಎಂ ಎನ್, ಧರ್ಮರಕ್ಷಾ ವೇದಿಕೆ, ತೋಟತ್ತಾಡಿ ಇದರ ಅಧ್ಯಕ್ಷರಾದ ಶ್ರೀ ಪ್ರಸಾದ್ ಮಡಿಯೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.


ಮದ್ಯಾಹ್ನ”ಮಹಾಪೂಜೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ”ಮಧ್ಯಾಹ್ನ 2 ರಿಂದ ವಿವಿಧ ಆಹ್ವಾನಿತ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ ಮಹಾಪೂಜೆ ನಂತರ ಶ್ರೀ ಶಾರದಾ ದೇವಿ ಮೂರ್ತಿಯ ವೈಭವಯುತ ಶೋಭಾಯಾತ್ರೆ ನಡೆಯಿತು.

Related posts

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya
error: Content is protected !!