25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

ಬೆಳ್ತಂಗಡಿ : ದಸರಾ ಕವಿಗೋಷ್ಠಿ – 2025’ ನವರಸ ರಂಜನೆಯ ಬಹುಭಾಷಾ ಕವಿಮೇಳವನ್ನು ಅಕ್ಟೋಬರ್ 2 ವಿಜಯ ದಶಮಿ ಯಂದು ಮಂಗಳಾದೇವಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ಪ್ರದೀಪ ಕುಮಾರ್ ಕಲ್ಕೂರ ಕವಿಗೋಷ್ಠಿಯನ್ನು ಉದ್ಘಾಟಿಸುವರು.

ಕವಿ – ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ 10 ಮಂದಿ ಪ್ರಮುಖ ಕವಿಗಳು ಭಾಗವಹಿಸಲಿದ್ದು, 10 ಜನ ಕವಿಗಳಲ್ಲಿ ಬೆಳ್ತಂಗಡಿ ತಾಲೂಕಿನಿಂದ ವಸಂತಿ ಟಿ ನಿಡ್ಲೆ ಓರ್ವರಾಗಿರುತ್ತಾರೆ. ಬಹುಮುಖ ಪ್ರತಿಭಾ ಸಂಪನ್ನೆಯಾಗಿರುವ ಇವರು ವೃತ್ತಿಯಲ್ಲಿ ಶಿಕ್ಷಕಿ. ಪ್ರವೃತ್ತಿ ಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆ.ಹಲವಾರು ಸಾಹಿತ್ಯ ಸಮ್ಮೇಳನ ಗಳಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿರುವ ಇವರು 2024ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿ, ಒಟ್ಟು 1 ರಾಷ್ಟ್ರ ಪ್ರಶಸ್ತಿ, 8 ರಾಜ್ಯ ಪ್ರಶಸ್ತಿ, 1 ಜಿಲ್ಲಾ ಪ್ರಶಸ್ತಿ 2 ತಾಲೂಕು ಮಟ್ಟದ ಪ್ರಶಸ್ತಿ. ಹೀಗೆ 12 ಪ್ರಶಸ್ತಿ ಗಳನ್ನು ಮುಡಿಗೇರಿ ಸಿಕೊಂಡ ಅಪ್ರತಿಮ ಸಾಧಕಿ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.

Related posts

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಶಿಬಾಜೆ ಜನಸ್ಪಂದನ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya
error: Content is protected !!