25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

ಬೆಳ್ತಂಗಡಿ : ದಸರಾ ಕವಿಗೋಷ್ಠಿ – 2025’ ನವರಸ ರಂಜನೆಯ ಬಹುಭಾಷಾ ಕವಿಮೇಳವನ್ನು ಅಕ್ಟೋಬರ್ 2 ವಿಜಯ ದಶಮಿ ಯಂದು ಮಂಗಳಾದೇವಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ಪ್ರದೀಪ ಕುಮಾರ್ ಕಲ್ಕೂರ ಕವಿಗೋಷ್ಠಿಯನ್ನು ಉದ್ಘಾಟಿಸುವರು.

ಕವಿ – ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ 10 ಮಂದಿ ಪ್ರಮುಖ ಕವಿಗಳು ಭಾಗವಹಿಸಲಿದ್ದು, 10 ಜನ ಕವಿಗಳಲ್ಲಿ ಬೆಳ್ತಂಗಡಿ ತಾಲೂಕಿನಿಂದ ವಸಂತಿ ಟಿ ನಿಡ್ಲೆ ಓರ್ವರಾಗಿರುತ್ತಾರೆ. ಬಹುಮುಖ ಪ್ರತಿಭಾ ಸಂಪನ್ನೆಯಾಗಿರುವ ಇವರು ವೃತ್ತಿಯಲ್ಲಿ ಶಿಕ್ಷಕಿ. ಪ್ರವೃತ್ತಿ ಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆ.ಹಲವಾರು ಸಾಹಿತ್ಯ ಸಮ್ಮೇಳನ ಗಳಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿರುವ ಇವರು 2024ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿ, ಒಟ್ಟು 1 ರಾಷ್ಟ್ರ ಪ್ರಶಸ್ತಿ, 8 ರಾಜ್ಯ ಪ್ರಶಸ್ತಿ, 1 ಜಿಲ್ಲಾ ಪ್ರಶಸ್ತಿ 2 ತಾಲೂಕು ಮಟ್ಟದ ಪ್ರಶಸ್ತಿ. ಹೀಗೆ 12 ಪ್ರಶಸ್ತಿ ಗಳನ್ನು ಮುಡಿಗೇರಿ ಸಿಕೊಂಡ ಅಪ್ರತಿಮ ಸಾಧಕಿ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.

Related posts

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya
error: Content is protected !!