25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

ಬೆಳ್ತಂಗಡಿ : ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಉತ್ತಮ ಸಂಸ್ಕಾರದ ಜತೆ ಜೀವನ ಶಿಕ್ಷಣ ನೀಡುವಂತಹುದು. ಶ್ರೀ ಗುರುದೇವ ಕಾಲೇಜಿನ ಎನ್.ಎಸ್.ಎಸ್. ಶಿಬಿರಾರ್ಥಿಗಳು ಶಿಸ್ತು ಮತ್ತು ಸಂಸ್ಕಾರಯುತವಾಗಿ ನಡೆದುಕೊಂಡ ರೀತಿಯಲ್ಲೇ ಅವರಲ್ಲಿ ಉತ್ತಮ ವ್ಯಕ್ತಿತ್ವ ಬೆಳೆದಿದೆ ಎಂದು ಅರ್ಥವಾಗುತ್ತಿದೆ ಎಂದು ನಾರಾವಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ, ಎನ್.ಎಸ್.ಎಸ್. ಶಿಬಿರ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಉದಯ ಹೆಗ್ಡೆ ನಾರಾವಿ ಹೇಳಿದರು.

ಅವರು ನಾರಾವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸೆ.22 ರಿಂದ 28 ರವರೆಗೆ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ ಮಾತನಾಡಿ, ‘ ‘ಶಿಬಿರದಲ್ಲಿ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ನೋಡಿ ಬಹಳ ಸಂತೋಷವಾಯಿತು. ಶ್ರಮದಾನದಲ್ಲಿ ತಾವು ಕೂಲಿ ಕಾರ್ಮಿಕರಿಗಿಂತ ಕಡಿಮೆ ಇಲ್ಲ ಎಂಬುದನ್ನು ಮಾಡುವ ಕೆಲಸದ ಮೂಲಕ ತೋರಿಸಿಕೊಟ್ಟಿದ್ದಾರೆ’ ಎಂದರು.

ಶಾಲಾ ಮುಖ್ಯೋಪಾಧ್ಯಯಿನಿ ಸುಶೀಲ ಮಾತನಾಡಿ, ‘ ಎನ್.ಎಸ್.ಎಸ್. ಈ ಶಾಲೆಗೆ ಮತ್ತು ಊರಿಗೆ ಹೊಸ ಅನುಭವ ನೀಡಿದೆ. ಶಿಬಿರಾರ್ಥಿಗಳು ಪ್ರತಿಯೊಂದು ವಿಚಾರದಲ್ಲೂ ತೊಡಗಿಸಿಕೊಂಡ ರೀತಿ ಅದ್ಭುತವಾಗಿತ್ತು. ಶಿಸ್ತು ಮತ್ತು ಸಮಯ ಪಾಲನೆಗೆ ನೀಡಿದ ಮಹತ್ವ ಶಿಬಿರಾರ್ಥಿಗಳ ಬದುಕಿನುದ್ದಕ್ಕೂ ಇರುವಂತಾಗಲಿ’ ಎಂದು ಹಾರೈಸಿದರು.

ಶಿಬಿರ ನಿರ್ವಹಣಾ ಸಮಿತಿ ಅಧ್ಯಕ್ಷ ಅಭಿಜಿತ್ ಜೈನ್ ಮಾತನಾಡಿ, ‘ಶಿಬಿರದ ಉದ್ದಕ್ಕೂ ನಾರಾವಿ ಪರಿಸರದ ಜನ ಉತ್ತಮ ಸ್ಪಂದನೆ ನೀಡಿದ್ದಾರೆ. ಶಿಬಿರಾರ್ಥಿಗಳು ಕೇವಲ ಶಾಲೆಯಲ್ಲಿ ಮಾತ್ರವಲ್ಲದೆ ನಾರಾವಿ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಗ್ರಾಮ ಪಂಚಾಯಿತಿ ಸಹಕಾರದಲ್ಲಿ ಮಾಡಿರುವುದು ಶ್ಲಾಘನೀಯ ಕಾರ್ಯ’ ಎಂದರು.

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು.

ನಾರಾವಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಮಿತ್ರಾ, ಬಿರ್ವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪೂಜಾರಿ ಡೊಂಕುಬೆಟ್ಟು, ನಾರಾವಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ರಾಜೇಂದ್ರ ಕುಮಾರ್, ಪ್ರೇಮಾ ಟೀಚರ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುರೇಶ್ ಪೂಜಾರಿ, ಎನ್.ಎಸ್.ಎಸ್. ಘಟಕದ ನಾಯಕ ಮಹಮ್ಮದ್ ಜುನೈದ್, ನಾಯಕಿ ಸಂಧ್ಯಾ ಇದ್ದರು.

ಕಾಲೇಜಿನ ಗಣಕವಿಜ್ಞಾನ ವಿಭಾಗದ ಉಪನ್ಯಾಸಕಿ ಶುಭಲಕ್ಷ್ಮಿ ಸ್ವಾಗತಿಸಿದರು. ಸಹ ಶಿಬಿರಾಧಿಕಾರಿಗಳಾದ ಸುಷ್ಮಾ ವರದಿಯನ್ನು, ಸೌಜನ್ಯ ವಿವಿಧ ವಿಭಾಗದಲ್ಲಿ ವಿಜೇತ ಶಿಬಿರಾರ್ಥಿಗಳ ಪಟ್ಟಿ ವಾಚಿಸಿದರು. ಶಿಬಿರಾಧಿಕಾರಿ ಗಣೇಶ್ ಬಿ ಶಿರ್ಲಾಲು ವಂದಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕ ಹರೀಶ್ ಪೂಜಾರಿ ಹಾಗೂ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಅನನ್ಯ ಕಾರ್ಯಕ್ರಮ ನಿರೂಪಿಸಿದರು.

7 ದಿನಗಳ ಕಾಲ ನಡೆದ ಶಿಬಿರದಲ್ಲಿ ಹಾವುಗಳು-ನಾವುಗಳು-ಪರಿಸರ, ಜೀವನದಲ್ಲಿ ಸೃಜನಾತ್ಮಕ ದೃಷ್ಟಿಕೋಣ, ಅರಿವು, ರಂಗಕಲೆ ಮತ್ತು ಶಿಕ್ಷಣ, ಕರಕುಶಲಕಲೆ ಮತ್ತು ಶಿಕ್ಷಣ ಹಾಗೂ ಮನೆಯಂಗಳದಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ ಮುಂತಾದ ವಿಚಾರಗಳಲ್ಲಿ ಸ್ನೇಕ್ ಕಿರಣ್, ಬಸಪ್ಪ ಹಲಗೇರ, ಅಶ್ವಿತಾ ಆರ್ ಹೆಗ್ಡೆ, ಸಮೀಕ್ಷಾ ಶಿರ್ಲಾಲು, ಯಶವಂತ ಬೆಳ್ತಂಗಡಿ, ವಿಶ್ವರಕ್ಷಾ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಉಪಯುಕ್ತ ಮಾಹಿತಿ ನೀಡಿದರು. ಬಜಗೋಳಿ ಏಕದಂತ ಡೆಂಟಲ್ ಕ್ಲಿನಿಕ್ ಡಾ. ಮುರಳಿ ಪ್ರಸಾದ್ ಶಿಬಿರಾರ್ಥಿಗಳಿಗೆ ಉಚಿತ ದಂತ ತಪಾಸಣೆ ನಡೆಸಿದರು.

Related posts

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya
error: Content is protected !!