ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಮಡಂತ್ಯಾರು : 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಕ್ಷೀರ ಗಂಗಾ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ.ನಾಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸಂಘವು ಲಾಭ ಗಳಿಸಲು ಸಂಘದ ಸದಸ್ಯರು ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡಿರುವುದರಿಂದ ರೂ. 53837821.70 ವ್ಯವಹಾರ ನಡೆಸಿ, ವರದಿ ಸಾಲಿನಲ್ಲಿ ರೂ. 2,22,174.98 ಲಾಭ ಗಳಿಸಿದೆ. ಅದುದರಿಂದ ಸದಸ್ಯರಿಗೆ ಶೇ. 6 ಡಿವಿಡೆಂಡ್ ಘೋಷಣೆ ಮಾಡಿದರು.


ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯದರ್ಶಿ ಸೌಮ್ಯ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ದ.ಕ.ಹಾಲು ಒಕ್ಕೂಟ ಮಾಜಿ ನಿರ್ದೇಶಕ ಪದ್ಮನಾಭ ಅರ್ಕಜೆ, ವರ್ಗಾವಣೆ ಹೊಂದಿರುವ ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ನಾಳ ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷ ಸುಧಾಕರ ಮಜಲು, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರನ್ನು ಮತ್ತು ಸಂಘದ ಸದಸ್ಯರ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಿದರು.

ಸಂಘದ ನಿರ್ದೇಶಕರಾದ ಸುಧಾಕರ ಮಜಲು, ಬಾಲಕೃಷ್ಣ ಶೆಟ್ಟಿ, ವಿಠ್ಠಲ ಗೌಡ, ಬೊಮ್ಮಣ್ಣ ಗೌಡ, ಶ್ರೀಧರ ಪೂಜಾರಿ, ರಮೇಶ್‌ ಶೆಟ್ಟಿ, ಜಗದೀಶ, ರೇಖಾ, ರೀತಾ ಕೆ., ವಿಜಯ, ಲೀಲಾವತಿ ಹಾಗೂ ಸಂಘದ ಸದಸ್ಯರು ಮತ್ತಿತರರಿದ್ದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya
error: Content is protected !!