25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ವಾರ್ಷಿಕ ಮಹಾಸಭೆಯು ಸೆ.30 ರಂದು ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಂದ್ರಕಾಂತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಒಕ್ಕೂಟದ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರು ಸೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಸ್ತಾವಿಕವಾಗಿ ತಾಲೂಕು ಬ್ಲಾಕ್ ಮ್ಯಾನೇಜರ್ ನಿತೀಶ್ ಮಾತನಾಡಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM) ಬಗ್ಗೆ, ಬ್ಯಾಂಕ್ ಸಾಲದ ಬಗ್ಗೆ, ವಿಮೆಯ ಬಗ್ಗೆ, ಸಂಜೀವಿನಿ ಯೋಜನೆಯ ಬಗ್ಗೆ ಸಮುದಾಯ ಬಂಡವಾಳ ನಿಧಿಯಿಂದ ಮಹಿಳೆಯರು ವಿವಿಧ ಆಹಾರೋತ್ಪನ್ನ ಚಟುವಟಿಕೆ ನಡೆಸಬೇಕು. ಆರ್ಥಿಕ ಮಟ್ಟ ಏರಿಕೆಯಾಗಬೇಕು. PMFME ಸಾಲ ಸೌಲಭ್ಯ ಮನೆಯಲ್ಲಿ ತಯಾರಿಸುವ ಉತ್ಪನ್ನಗಳಿಗೆ FSSAI ಸರ್ಟಿಫಿಕೇಟ್ ಮಾಡಿಕೊಡುವ ಬಗ್ಗೆ ಸವಿಸ್ತಾರವಾಗಿ ತಿಳಿಸಿ ಕೊಟ್ಟರು.

ಶ್ರೀಮತಿ ಶ್ರುತಿಯವರು 2024-2ರ ಸಾಲಿನ ವಾರ್ಷಿಕ ವರದಿ ಮತ್ತು ಜಮಾ ಖರ್ಚು ಮಂಡಿಸಿದರು. BRPPRI ಯಾದ ಶ್ರೀಕಲಾ VPRPಯ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಮಾದಕ ವ್ಯಸನ ಮುಕ್ತ ಪ್ರತಿಜ್ಞೆ ಮಾಡಲಾಯಿತು. ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ಮಾತನಾಡಿ ಒಕ್ಕೂಟವು ಇನ್ನಷ್ಟು ಲಾಭಯುತವಾಗಿ ಮುನ್ನಡೆಯಲೆಂದು ಶುಭ ಹಾರೈಸಿದರು. ಅದೃಷ್ಟ ಮಹಿಳೆಯರು ಗೇಮ್ ಆಯೋಜಿಸಿ ಅದೃಷ್ಟ ಮೂವರು ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ರಸಪ್ರಶ್ನೆ ಆಯೋಜಿಸಲಾಗಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಿರ್ಗಮಿತ ಪದಾಧಿಕಾರಿಗಳಿಗೆ ಗೌರವ ಸ್ಮರಣಿಕೆ ನೀಡಲಾಯಿತು. ಸಭಾಧ್ಯಕ್ಷತೆಯನ್ನು ವಹಿಸಿಕೊಂಡ ಒಕ್ಕೂಟದ ಅಧ್ಯಕ್ಷ ಮಾತನಾಡಿ ತನ್ನ ಅವಧಿಯಲ್ಲಿನ ಅನುಭವವನ್ನು ಹಂಚಿಕೊಂಡರು.

ಒಕ್ಕೂಟದ ಸದಸ್ಯರಾದ ವಾರಿಜ ಭಕ್ತಿಗೀತೆ ಹಾಡಿದರು. ರೋಹಿಣಿ ಸ್ವಾಗತಿಸಿದರು. ಸೌಮ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಪಶು ಸಖಿ ರೇವತಿ ಧನ್ಯವಾದವಿತ್ತರು.

Related posts

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!