22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ವಾರ್ಷಿಕ ಮಹಾಸಭೆಯು ಸೆ.30 ರಂದು ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಂದ್ರಕಾಂತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಒಕ್ಕೂಟದ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರು ಸೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಸ್ತಾವಿಕವಾಗಿ ತಾಲೂಕು ಬ್ಲಾಕ್ ಮ್ಯಾನೇಜರ್ ನಿತೀಶ್ ಮಾತನಾಡಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM) ಬಗ್ಗೆ, ಬ್ಯಾಂಕ್ ಸಾಲದ ಬಗ್ಗೆ, ವಿಮೆಯ ಬಗ್ಗೆ, ಸಂಜೀವಿನಿ ಯೋಜನೆಯ ಬಗ್ಗೆ ಸಮುದಾಯ ಬಂಡವಾಳ ನಿಧಿಯಿಂದ ಮಹಿಳೆಯರು ವಿವಿಧ ಆಹಾರೋತ್ಪನ್ನ ಚಟುವಟಿಕೆ ನಡೆಸಬೇಕು. ಆರ್ಥಿಕ ಮಟ್ಟ ಏರಿಕೆಯಾಗಬೇಕು. PMFME ಸಾಲ ಸೌಲಭ್ಯ ಮನೆಯಲ್ಲಿ ತಯಾರಿಸುವ ಉತ್ಪನ್ನಗಳಿಗೆ FSSAI ಸರ್ಟಿಫಿಕೇಟ್ ಮಾಡಿಕೊಡುವ ಬಗ್ಗೆ ಸವಿಸ್ತಾರವಾಗಿ ತಿಳಿಸಿ ಕೊಟ್ಟರು.

ಶ್ರೀಮತಿ ಶ್ರುತಿಯವರು 2024-2ರ ಸಾಲಿನ ವಾರ್ಷಿಕ ವರದಿ ಮತ್ತು ಜಮಾ ಖರ್ಚು ಮಂಡಿಸಿದರು. BRPPRI ಯಾದ ಶ್ರೀಕಲಾ VPRPಯ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಮಾದಕ ವ್ಯಸನ ಮುಕ್ತ ಪ್ರತಿಜ್ಞೆ ಮಾಡಲಾಯಿತು. ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ಮಾತನಾಡಿ ಒಕ್ಕೂಟವು ಇನ್ನಷ್ಟು ಲಾಭಯುತವಾಗಿ ಮುನ್ನಡೆಯಲೆಂದು ಶುಭ ಹಾರೈಸಿದರು. ಅದೃಷ್ಟ ಮಹಿಳೆಯರು ಗೇಮ್ ಆಯೋಜಿಸಿ ಅದೃಷ್ಟ ಮೂವರು ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ರಸಪ್ರಶ್ನೆ ಆಯೋಜಿಸಲಾಗಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಿರ್ಗಮಿತ ಪದಾಧಿಕಾರಿಗಳಿಗೆ ಗೌರವ ಸ್ಮರಣಿಕೆ ನೀಡಲಾಯಿತು. ಸಭಾಧ್ಯಕ್ಷತೆಯನ್ನು ವಹಿಸಿಕೊಂಡ ಒಕ್ಕೂಟದ ಅಧ್ಯಕ್ಷ ಮಾತನಾಡಿ ತನ್ನ ಅವಧಿಯಲ್ಲಿನ ಅನುಭವವನ್ನು ಹಂಚಿಕೊಂಡರು.

ಒಕ್ಕೂಟದ ಸದಸ್ಯರಾದ ವಾರಿಜ ಭಕ್ತಿಗೀತೆ ಹಾಡಿದರು. ರೋಹಿಣಿ ಸ್ವಾಗತಿಸಿದರು. ಸೌಮ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಪಶು ಸಖಿ ರೇವತಿ ಧನ್ಯವಾದವಿತ್ತರು.

Related posts

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!