22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗುರುನಮನ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಗಳು ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸಾಂಸ್ಕೃತಿಕ ಹಬ್ಬದ ವಾತಾವರಣವನ್ನು ಸೃಷ್ಟಿಸಿದರು.


ಸಂಸ್ಕೃತ ಭಾಷಾ ಉಪನ್ಯಾಸಕರಾದ ರಘು ಬಿಜೂರು ಅವರು ತಮ್ಮ ತಂಡದ ವತಿಯಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಅನೇಕ ಉಪನ್ಯಾಸಕರು ತಂಡಗಳಾಗಿ ವೈವಿದ್ಯಮಯ ಕಾರ್ಯಕ್ರಮಗಳ ಜೊತೆಗೆ ಇಂಪಾದ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿ, ಪೋಷಕರ ಮನರಂಜಿಸಿದರು. ವಿನೂತನ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದ ಈ ಸಾಂಸ್ಕೃತಿಕ ಹಬ್ಬದಲ್ಲಿ ನಿಲಯ ಪಾಲಕರು ಮತ್ತು ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದು ಗಮನ ಸೆಳೆಯಿತು.


ಈ ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಉಪನ್ಯಾಸಕ ವರ್ಗದವರೇ ಸೇರಿಕೊಂಡು ಶ್ರೀ ದೇವಿ ಮಹಾತ್ಮೆ– ಮಹಿಷ ಮರ್ದಿನಿ ಎನ್ನುವ ಯಕ್ಷಗಾನ ಪ್ರಸಂಗವನ್ನು ನಡೆಸಿಕೊಟ್ಟರು. ಭಾಗವತರಾಗಿ ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಈಶ್ವರ ಶರ್ಮ, ಮದ್ದಳೆಯಲ್ಲಿಸಂಸ್ಕೃತ ವಿಭಾಗದ ವೆಂಕಟೇಶ್, ಚೆಂಡೆಯಲ್ಲಿ ವಿದ್ಯಾರ್ಥಿ ಅತುಲ್ ಕೃಷ್ಣ ಸಹಕರಿದರು. ದೇವೇಂದ್ರನಾಗಿ ಕನ್ನಡ ವಿಭಾಗದ ಮುಖ್ಯಸ್ಥರಾದ ಜಯರಾಮ್, ದೇವ ಬಲಗಳಾಗಿ ಕನ್ನಡ ವಿಭಾಗದ ಚರಣ್ ಮತ್ತು ಕಚೇರಿ ಸಹಾಯಕರಾದ ಜಯಪ್ರಕಾಶ್, ಮಹಿಷಾಸುರನಾಗಿ ಗಣಕ ವಿಜ್ಞಾನ ವಿಭಾಗದ ವಿನಯ್ , ಬಣ್ಣದ ಬಲಗಳಾಗಿ ಆಡಳಿತಾಧಿಕಾರಿ ಕೀರ್ತಿನಿಧಿ ಜೈನ್, ರಸಾಯನ ವಿಜ್ಞಾನ ವಿಭಾಗದ ಶಿವರಾಜ್, ನಿಲಯ ಪಾಲಕರಾದ ಸುನಿಲ್ ,ಬ್ರಹ್ಮನಾಗಿ ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್,ವಿಷ್ಣು ಮತ್ತು ಮಾಲಿನಿ ದೂತನಾಗಿ ಜೀವ ವಿಜ್ಞಾನ ವಿಭಾಗದ ಪ್ರಜ್ವಿತ್ ರೈ,ಈಶ್ವರನಾಗಿ ರಸಾಯನ ವಿಜ್ಞಾನ ವಿಭಾಗದ ಪ್ರದೀಪ್ ನಾಗ್, ಮಾಲಿನಿಯಾಗಿ ಆಪ್ತ ಸಮಾಲೋಚನಾ ವಿಭಾಗದ ದುರ್ಗಾ ಪರಮೇಶ್ವರ, ಸುಪಾರ್ಶ್ವ ಮುನಿಯಾಗಿ ಕನ್ನಡ ವಿಭಾಗದ ಸಂಜೀವ್, ಸಿಂಹನಾಗಿ ಕಚೇರಿ ಸಹಾಯಕರಾದ ಗಣೇಶ ,ಶ್ರೀದೇವಿಯಾಗಿ ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ ಭಾಗವಹಿಸಿದ್ದರು.

ಉಪನ್ಯಾಸಕರು ತಮ್ಮ ಪಾತ್ರಗಳನ್ನು ಅತ್ಯಂತ ಸೊಗಸಾಗಿ ಅಭಿನಯಿಸಿದರು . ರಾಜ್ಯದ ವಿವಿಧ ಮೂಲೆಗಳಿಂದ ಬಂದಿದ್ದ ಅನೇಕ ಪೋಷಕರು ಎಕ್ಸೆಲ್ ಸಾಂಸ್ಕೃತಿಕ ವೈಭವವನ್ನು ಮನ ತುಂಬಿಕೊಂಡಿದ್ದಲ್ಲದೆ ಸಂತಸವನ್ನು ವ್ಯಕ್ತಪಡಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ, ಡಾ.ಪ್ರಜ್ವಲ್ ಕಜೆ, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

Related posts

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya
error: Content is protected !!