24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆ. 30 ರಂದು ಆಯುಧ ಪೂಜೆಯನ್ನು ವಿಧಿವತ್ತಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಹಾಗೂ ಶ್ರೀಮತಿ ಮೈತ್ರಿ ಇವರು ಆಗಮಿಸಿ ಪೂಜಾ ವಿಧಿಗಳಿಗೆ ನೇತೃತ್ವ ವಹಿಸಿ ವಿದ್ಯಾರ್ಥಿನಿಯರನ್ನು ಆಶೀರ್ವದಿಸಿದರು.

ದಸರಾ ಹಬ್ಬದ ಒಂಬನೇ ದಿನದಲ್ಲಿ ಆಚರಿಸುವ ಹಬ್ಬ ಆಯುಧ ಪೂಜೆ. ಶ್ರಮಕ್ಕೆ ಗೌರವ, ಶ್ರಮದ ಪಾವಿತ್ರ್ಯತೆ, ಸಂಪ್ರದಾಯದ ಮೌಲ್ಯ, ಒಗ್ಗಟ್ಟು, ಆಧ್ಯಾತ್ಮಿಕತೆ ಈ ಎಲ್ಲಾ ವಿಚಾರಗಳನ್ನ ಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳು ತಮ್ಮ ಲ್ಯಾಬ್‌ಗಳನ್ನು ಸ್ವಚ್ಛಗೊಳಿಸಿ ಅಲಂಕರಿಸಿ, ಉಪಕರಣಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕೂಡಾ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಪ್ರದಾಯಕ್ಕೆ ಗೌರವ ಸಲ್ಲಿಸಿದರು.

ಪ್ರತೀ ವರುಷ ಆಯುಧ ಪೂಜೆ ಮಾಡುವುದರಿಂದ ನಾವು ಉಪಯೋಗಿಸುವ ಆಯುಧ, ಮೆಷಿನರಿಗಳಿಂದ ಯಾವುದೇ ತೊಂದರೆಗಳು ಆಗಬಾರದು ಹಾಗೂ ಕಲಿತ ವಿದ್ಯೆ ಸಂಪೂರ್ಣವಾಗಿ ಉಪಯೋಗ ಆಗಬೇಕು ಎಂದು ಆಯುಧ ಪೂಜೆ ಹಾಗೂ ಶಾರದಾ ಪೂಜೆಯನ್ನು ಭಕ್ತಿಯಿಂದ ಆಚರಿಸಲಾಗುವುದು.

ಪ್ರಾಂಶುಪಾಲರಾದ ವಿ. ಪ್ರಕಾಶ್ ಕಾಮತ್, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯದಲ್ಲಿ ಭಾಗಿಯಾಗಿದ್ದರು.

Related posts

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya
error: Content is protected !!